ಮೈಸೂರಿನಲ್ಲಿ ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ನೋಟಿಸ್

ಮೈಸೂರು: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಆದ್ರೂ ಸಹ ಕೆಲವೊಂದು ಕಡೆ ನಿರ್ಲಕ್ಷ ಎದ್ದು ಕಾಣುತ್ತಿದೆ. ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅಭಿರಾಮ್ ಶೋಕಾಸ್ ನೋಟಿಸ್ ನೀಡಿದ್ದಾರೆ. ಮೈಸೂರಿನಲ್ಲಿ ಎರಡು ಸ್ಯಾರಿ ಕೇಸ್ ಪತ್ತೆಯಾಗಿದೆ. ನಜರ್‌ಬಾದ್, ಮೊಸಂಬಾಯನಹಳ್ಳಿಯಲ್ಲಿ ಪ್ರಕರಣ ವರಿಯಾಗಿದೆ. ಹಿಂದಿನಿಂದ ದಂಪತಿ ನರ್ಸಿಂಗ್ ಹೋಂಗೆ ಹೋಗಿದ್ದಾರೆ. ಆದರೆ ನರ್ಸಿಂಗ್ ಹೋಂನವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದರು. ಉಸಿರಾಟದ ತೊಂದರೆ ಇರುವವರು […]

ಮೈಸೂರಿನಲ್ಲಿ ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ನೋಟಿಸ್
ಸಾಧು ಶ್ರೀನಾಥ್​

Updated on: Apr 20, 2020 | 12:45 PM

ಮೈಸೂರು: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಆದ್ರೂ ಸಹ ಕೆಲವೊಂದು ಕಡೆ ನಿರ್ಲಕ್ಷ ಎದ್ದು ಕಾಣುತ್ತಿದೆ. ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅಭಿರಾಮ್ ಶೋಕಾಸ್ ನೋಟಿಸ್ ನೀಡಿದ್ದಾರೆ.

ಮೈಸೂರಿನಲ್ಲಿ ಎರಡು ಸ್ಯಾರಿ ಕೇಸ್ ಪತ್ತೆಯಾಗಿದೆ. ನಜರ್‌ಬಾದ್, ಮೊಸಂಬಾಯನಹಳ್ಳಿಯಲ್ಲಿ ಪ್ರಕರಣ ವರಿಯಾಗಿದೆ. ಹಿಂದಿನಿಂದ ದಂಪತಿ ನರ್ಸಿಂಗ್ ಹೋಂಗೆ ಹೋಗಿದ್ದಾರೆ. ಆದರೆ ನರ್ಸಿಂಗ್ ಹೋಂನವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದರು.

ಉಸಿರಾಟದ ತೊಂದರೆ ಇರುವವರು ಆಸ್ಪತ್ರೆಗೆ ಬಂದರೆ ಮಾಹಿತಿ ನೀಡಿ. ಇಲ್ಲದಿದ್ದರೆ ಮುಂದೆ ಪರಿಸ್ಥಿತಿ ಗಂಭೀರವಾಗುತ್ತದೆ. ಹಾಗಾಗಿ ನರ್ಸಿಂಗ್ ಹೋಂಗಳು ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us