Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ KRS ಹಿನ್ನೀರಿನಲ್ಲಿ ಮೈಸೂರು ಪೊಲೀಸರ ಮಸ್ತ್​ ಪಿಕ್‌ನಿಕ್ ಪಾರ್ಟಿ: ನಮಗಿಲ್ಲದ ಅವಕಾಶ ಅವರಿಗ್ಯಾಕೆ? ಎಂದ ಸಾರ್ವಜನಿಕರು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಹಿನ್ನೀರಿನಲ್ಲಿ ಪೊಲೀಸರು ಮಸ್ತ್​ ಪಿಕ್‌ನಿಕ್ ಪಾರ್ಟಿ ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ನಿಷೇಧವಿರುವ ಪ್ರದೇಶದಲ್ಲಿ ಮೈಸೂರು ಪೊಲೀಸರ ಪಿಕ್‌ನಿಕ್​ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಮಂಡ್ಯದ KRS ಹಿನ್ನೀರಿನಲ್ಲಿ ಮೈಸೂರು ಪೊಲೀಸರ ಮಸ್ತ್​ ಪಿಕ್‌ನಿಕ್ ಪಾರ್ಟಿ: ನಮಗಿಲ್ಲದ ಅವಕಾಶ ಅವರಿಗ್ಯಾಕೆ? ಎಂದ ಸಾರ್ವಜನಿಕರು
ಕೆಆರ್​ಎಸ್​ ಹಿನ್ನೀರಿನಲ್ಲಿ ಮೈಸೂರು ಪೊಲೀಸರ ಮಸ್ತ್​ ಪಿಕ್‌ನಿಕ್ ಪಾರ್ಟಿ
Follow us
ಪೃಥ್ವಿಶಂಕರ
|

Updated on:Feb 27, 2021 | 3:35 PM

ಮಂಡ್ಯ: KRS ಅಣೆಕಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶ ಅತೀ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗಿದ್ದು, ಈ ಜಾಗಗಳಲ್ಲಿ ಸಾರ್ವಜನಿಕರು ಸುಳಿಯದಂತೆ ನಿಷೇಧ ಹೇರಲಾಗಿದೆ. ಆದರೆ ಸರ್ಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದ್ದ ಪೊಲೀಸರೇ ಬೇಜವಾಬ್ದಾರಿ ತೋರುತ್ತಿರುವುದು ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಹಿನ್ನೀರಿನಲ್ಲಿ ಪೊಲೀಸರು ಮಸ್ತ್​ ಪಿಕ್‌ನಿಕ್ ಪಾರ್ಟಿ ಆಯೋಜಿಸಿದ್ದು, ಸಾರ್ವಜನಿಕರಿಗೆ ನಿಷೇಧವಿರುವ ಪ್ರದೇಶದಲ್ಲಿ ಮೈಸೂರು ಪೊಲೀಸರ ಪಿಕ್‌ನಿಕ್​ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮೈಸೂರಿನ ಪೊಲೀಸ್ ಅಕಾಡೆಮಿ ಸಿಬ್ಬಂದಿ ಕೆಆರ್‌ಎಸ್ ಹಿನ್ನೀರಿಗೆ ಪಿಕ್‌ನಿಕ್ ಬಂದಿದ್ದು, ಕೆಆರ್‌ಎಸ್ ಹಿನ್ನೀರಿನಲ್ಲಿ ಪೊಲೀಸರು ಹಾಗೂ ಅವರ ಕುಟುಂಬ ಈಜಾಡುತ್ತ ಕಾಲಕಳೆಯುತ್ತಿದ್ದಾರೆ. ಜೊತೆಗೆ ಪೊಲೀಸರು ಶಾಮಿಯಾನ ಹಾಕಿ ಡಿಜೆ  ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನಮಗೆ ರೆಸಾರ್ಟ್‌ಗೆ ಹೋಗಲು ಆಗಲ್ಲ.. ಈ ಬಗ್ಗೆ ಪೊಲೀಸರನ್ನು ಕೇಳಿದರೆ ನಮಗೆ ರೆಸಾರ್ಟ್‌ಗೆ ಹೋಗಲು ಆಗಲ್ಲ. ಅದಕ್ಕೆ ನಾವು ಇಲ್ಲಿ ಬಂದಿದ್ದೇವೆ ಎನ್ನುತ್ತಿದ್ದಾರೆ. ಮೈಸೂರು ಪೊಲೀಸ್ ಅಕಾಡೆಮಿ ನಿರ್ದೇಶಕಿ ಸುಮನ್‌ ನೇತೃತ್ವದಲ್ಲಿ 150 ಜನ ಬಂದಿದ್ದಾರೆ. KRS ಹಿನ್ನೀರು ನಿರ್ಭಂದಿತ ಪ್ರದೇಶವಾಗಿದ್ದು, ಸ್ಥಳೀಯರು ಸೇರಿದಂತೆ ಯಾರೊಬ್ಬರೂ ಸುಳಿಯುವ ಹಾಗಿಲ್ಲ. ಹಾಗಿದ್ರೂ 150 ಜನ ತಮ್ಮ ಕುಟುಂಬಸ್ಥರ ಜೊತೆ ಹಿನ್ನೀರಿನಲ್ಲಿ ಟೈಂ ಪಾಸ್ ಮಾಡುತ್ತಿರುವುದು ಸಾರ್ವಜನಿಕರನ್ನು ಕೆರಳಿಸಿದೆ.

ಇಂದು ಒಂದೇ ದಿನ ಈ ರೀತಿ ಪೊಲೀಸರ ಅತಿರೇಕದ ಎರಡು ಘಟನೆಗಳು ನಡೆದಿದ್ದು, ಇಂದು ಬೆಳ್ಳಿಗೆ ಕೆಆರ್‌ಎಸ್ ಡ್ಯಾಂ ಮೇಲೆ ಜೀಪ್​ ಚಲಾಯಿಸಿ ಯುವಕನೊಬ್ಬ ಅಂಧಾದರ್ಬಾರ್ ನಡೆಸಿರುವುದು ಬೆಳಕಿಗೆ ಬಂದಿತ್ತು. ಬೇಸರದ ಸಂಗತಿಯೆಂದರೆ ಆ ಜೀಪ್​ ಪೊಲೀಸ್ ವಾಹನವಾಗಿದ್ದು, ಯುವಕನೇ ಆ ಪೊಲೀಸ್​ ವಾಹನ ಚಲಾಯಿಸಿದ್ದಾನೆ. ಮತ್ತು ಆ ವಾಹನದ ನಿರ್ವಹಣೆ ಹೊತ್ತಿದ್ದ ಪೊಲೀಸ್​ ಅಧಿಕಾರಿ ಆ ಯುವಕನ ಪಕ್ಕದಲ್ಲೇ ಕುಳಿತಿದ್ದು, ಇಡೀ ಪ್ರಯಾಣದುದ್ದಕ್ಕೂ ಮೂಕ ಪ್ರೇಕ್ಷಕರಾಗಿದ್ದಾರೆ.

ಇದನ್ನೂ ಓದಿ: KRS Dam ಮೇಲೆ ಯುವಕನ ಖಾಸಗಿ ದರ್ಬಾರ್! ಡ್ಯಾಂ ಮೇಲೆ ಪೊಲೀಸ್ ಜೀಪ್ ಚಲಾಯಿಸಿದ್ದಲ್ಲದೇ ಮೊಬೈಲ್ ನಲ್ಲಿ ಚಿತ್ರೀಕರಣ!

Published On - 3:31 pm, Sat, 27 February 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ