AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ಮಾಡಿ.. ಆದ್ರೆ ವೈರಸ್​ ಬಗ್ಗೆ ಸ್ವಲ್ಪ ಕೇಳಿ – ಮೈಸೂರು SP ಕೊರೊನಾ ಪಾಠ

ಮೈಸೂರು‌: ಪ್ರತಿಭಟನಾನಿರತ ರೈತರಿಗೆ ಜಿಲ್ಲಾ ಪೊಲೀಸ್ SP ರಿಷ್ಯಂತ್ ಕೊರೊನಾ ಪಾಠ ಮಾಡಿದ್ದಾರೆ. ಜಿಲ್ಲೆಯ ನಂಜನಗೂಡಿನ ಮಿನಿ ವಿಧಾನಸೌಧದ ಕಚೇರಿಯ ಮುಂಭಾಗದಲ್ಲಿ ಘಟನೆ ನಡೆದಿದೆ. ರೈತ-ಕಾರ್ಮಿಕ‌ ಸಂಘಟನೆಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ SP ರಿಷ್ಯಂತ್ ಪ್ರತಿಭಟನಾಕಾರರಿಗೆ ಕೊರೊನಾವೈರಸ್ ಸೋಂಕಿನ ಕುರಿತು ಅರಿವು ಮೂಡಿಸಿದ್ದಾರೆ. ಪ್ರತಿಭಟನೆ […]

ಪ್ರತಿಭಟನೆ ಮಾಡಿ.. ಆದ್ರೆ ವೈರಸ್​ ಬಗ್ಗೆ ಸ್ವಲ್ಪ ಕೇಳಿ - ಮೈಸೂರು SP ಕೊರೊನಾ ಪಾಠ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 28, 2020 | 2:14 PM

Share

ಮೈಸೂರು‌: ಪ್ರತಿಭಟನಾನಿರತ ರೈತರಿಗೆ ಜಿಲ್ಲಾ ಪೊಲೀಸ್ SP ರಿಷ್ಯಂತ್ ಕೊರೊನಾ ಪಾಠ ಮಾಡಿದ್ದಾರೆ. ಜಿಲ್ಲೆಯ ನಂಜನಗೂಡಿನ ಮಿನಿ ವಿಧಾನಸೌಧದ ಕಚೇರಿಯ ಮುಂಭಾಗದಲ್ಲಿ ಘಟನೆ ನಡೆದಿದೆ.

ರೈತ-ಕಾರ್ಮಿಕ‌ ಸಂಘಟನೆಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ SP ರಿಷ್ಯಂತ್ ಪ್ರತಿಭಟನಾಕಾರರಿಗೆ ಕೊರೊನಾವೈರಸ್ ಸೋಂಕಿನ ಕುರಿತು ಅರಿವು ಮೂಡಿಸಿದ್ದಾರೆ.

ಪ್ರತಿಭಟನೆ ಭಾರತ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಪ್ರತಿಭಟನೆಯನ್ನು ಕಸಿದುಕೊಳ್ಳುವ ಅಥವಾ ಹತ್ತಿಕ್ಕುವ ಯಾವುದೇ ಪ್ರಯತ್ನ ನಮ್ಮದಲ್ಲ. ಕಾನೂನುಬಾಹಿರ ಪ್ರತಿಭಟನೆಗೆ ಕಡಿವಾಣ ಹಾಕುತ್ತೇವೆ. ಆದರೆ, ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸಿದರೆ ಸಹಕರಿಸುತ್ತೇವೆ ಎಂದು SP ರಿಷ್ಯಂತ್ ಹೇಳಿದರು.

ಜೀವ ಬದುಕಿದರೆ ಏನು ಬೇಕಾದರೂ ಸಾಧಿಸಬಹುದು. ಜೀವ ಕಳೆದುಕೊಂಡಾಗ ವ್ಯಥೆ ಪಡುವವರು ಕುಟುಂಬಸ್ಥರು. ಸರ್ಕಾರದ ನೀತಿ ನಿಯಮಗಳನ್ನು ಪಾಲನೆ ಮಾಡಿ. ಕೊರೊನಾ ಸಾಕಷ್ಟು ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಎಷ್ಟೋ ಜನರ ಪ್ರಾಣವನ್ನು ಕೊರೊನಾ ನುಂಗಿದೆ.

ವಾಸ್ತವತೆ ಹೀಗಿರುವಾಗ ಎಚ್ಚರಿಕೆಯಿಂದ, ಜಾಗೃತಿಯಿಂದ ಕಾನೂನುಬದ್ಧವಾಗಿ ಪ್ರತಿಭಟನೆ ಮಾಡುವುದು ಒಳಿತು ಎಂದು ಪ್ರತಿಭಟನಾಕಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಹೇಳಿದರು. ಖುದ್ದು ಕೊರೊ‌ನಾ ಸೋಂಕಿತರಾಗಿ ಗುಣಮುಖರಾಗಿದ್ದ ಪೊಲೀಸ್​ ವರಿಷ್ಠಾಧಿಕಾರಿ CB ರಿಷ್ಯಂತ್ ಮಾತಿಗೆ ಪ್ರತಿಭಟನಾಕಾರರು ಸಮ್ಮತಿಸಿದರು.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!