AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ಮಾಡಿ.. ಆದ್ರೆ ವೈರಸ್​ ಬಗ್ಗೆ ಸ್ವಲ್ಪ ಕೇಳಿ – ಮೈಸೂರು SP ಕೊರೊನಾ ಪಾಠ

ಮೈಸೂರು‌: ಪ್ರತಿಭಟನಾನಿರತ ರೈತರಿಗೆ ಜಿಲ್ಲಾ ಪೊಲೀಸ್ SP ರಿಷ್ಯಂತ್ ಕೊರೊನಾ ಪಾಠ ಮಾಡಿದ್ದಾರೆ. ಜಿಲ್ಲೆಯ ನಂಜನಗೂಡಿನ ಮಿನಿ ವಿಧಾನಸೌಧದ ಕಚೇರಿಯ ಮುಂಭಾಗದಲ್ಲಿ ಘಟನೆ ನಡೆದಿದೆ. ರೈತ-ಕಾರ್ಮಿಕ‌ ಸಂಘಟನೆಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ SP ರಿಷ್ಯಂತ್ ಪ್ರತಿಭಟನಾಕಾರರಿಗೆ ಕೊರೊನಾವೈರಸ್ ಸೋಂಕಿನ ಕುರಿತು ಅರಿವು ಮೂಡಿಸಿದ್ದಾರೆ. ಪ್ರತಿಭಟನೆ […]

ಪ್ರತಿಭಟನೆ ಮಾಡಿ.. ಆದ್ರೆ ವೈರಸ್​ ಬಗ್ಗೆ ಸ್ವಲ್ಪ ಕೇಳಿ - ಮೈಸೂರು SP ಕೊರೊನಾ ಪಾಠ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 28, 2020 | 2:14 PM

Share

ಮೈಸೂರು‌: ಪ್ರತಿಭಟನಾನಿರತ ರೈತರಿಗೆ ಜಿಲ್ಲಾ ಪೊಲೀಸ್ SP ರಿಷ್ಯಂತ್ ಕೊರೊನಾ ಪಾಠ ಮಾಡಿದ್ದಾರೆ. ಜಿಲ್ಲೆಯ ನಂಜನಗೂಡಿನ ಮಿನಿ ವಿಧಾನಸೌಧದ ಕಚೇರಿಯ ಮುಂಭಾಗದಲ್ಲಿ ಘಟನೆ ನಡೆದಿದೆ.

ರೈತ-ಕಾರ್ಮಿಕ‌ ಸಂಘಟನೆಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ SP ರಿಷ್ಯಂತ್ ಪ್ರತಿಭಟನಾಕಾರರಿಗೆ ಕೊರೊನಾವೈರಸ್ ಸೋಂಕಿನ ಕುರಿತು ಅರಿವು ಮೂಡಿಸಿದ್ದಾರೆ.

ಪ್ರತಿಭಟನೆ ಭಾರತ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಪ್ರತಿಭಟನೆಯನ್ನು ಕಸಿದುಕೊಳ್ಳುವ ಅಥವಾ ಹತ್ತಿಕ್ಕುವ ಯಾವುದೇ ಪ್ರಯತ್ನ ನಮ್ಮದಲ್ಲ. ಕಾನೂನುಬಾಹಿರ ಪ್ರತಿಭಟನೆಗೆ ಕಡಿವಾಣ ಹಾಕುತ್ತೇವೆ. ಆದರೆ, ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸಿದರೆ ಸಹಕರಿಸುತ್ತೇವೆ ಎಂದು SP ರಿಷ್ಯಂತ್ ಹೇಳಿದರು.

ಜೀವ ಬದುಕಿದರೆ ಏನು ಬೇಕಾದರೂ ಸಾಧಿಸಬಹುದು. ಜೀವ ಕಳೆದುಕೊಂಡಾಗ ವ್ಯಥೆ ಪಡುವವರು ಕುಟುಂಬಸ್ಥರು. ಸರ್ಕಾರದ ನೀತಿ ನಿಯಮಗಳನ್ನು ಪಾಲನೆ ಮಾಡಿ. ಕೊರೊನಾ ಸಾಕಷ್ಟು ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಎಷ್ಟೋ ಜನರ ಪ್ರಾಣವನ್ನು ಕೊರೊನಾ ನುಂಗಿದೆ.

ವಾಸ್ತವತೆ ಹೀಗಿರುವಾಗ ಎಚ್ಚರಿಕೆಯಿಂದ, ಜಾಗೃತಿಯಿಂದ ಕಾನೂನುಬದ್ಧವಾಗಿ ಪ್ರತಿಭಟನೆ ಮಾಡುವುದು ಒಳಿತು ಎಂದು ಪ್ರತಿಭಟನಾಕಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಹೇಳಿದರು. ಖುದ್ದು ಕೊರೊ‌ನಾ ಸೋಂಕಿತರಾಗಿ ಗುಣಮುಖರಾಗಿದ್ದ ಪೊಲೀಸ್​ ವರಿಷ್ಠಾಧಿಕಾರಿ CB ರಿಷ್ಯಂತ್ ಮಾತಿಗೆ ಪ್ರತಿಭಟನಾಕಾರರು ಸಮ್ಮತಿಸಿದರು.

Follow Us
KUSHAL V
KUSHAL V
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ