AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ […]

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Jun 15, 2020 | 11:17 AM

Share

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ.

ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ ಪರಿಸ್ಥಿತಿ. ಇದೀಗ ಈ ಎರಡು ಮಾರುಕಟ್ಟೆಗಳನ್ನು ಪ್ರತಿ ಭಾನುವಾರ ಬಂದ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಹೌದು, ಮೈಸೂರಿನಲ್ಲಿ ಮಹಾಮಾರಿ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಒಂದು ಸಮಯದಲ್ಲಿ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಈಗ 20 ಆ್ಯಕ್ಟೀವ್ ಪ್ರಕರಣಗಳಿವೆ. ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದ ಬಂದವರಿಂದ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಈಗ ವರ್ತಕರು ಕೈ ಜೋಡಿಸಲು ಮುಂದಾಗಿದ್ದಾರೆ. ಸೋಮವಾರದಿಂದ ಶನಿವಾರದ ತನಕ ವ್ಯಾಪರ ನಡೆಸಿ, ಭಾನುವಾರ ಅಂಗಡಿಗಳು ಕ್ಲೋಸ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಸದ್ಯ, ಮೈಸೂರಿನಲ್ಲಿ 94 ಜನರು ಮಹಾಮಾರಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಪ್ರತಿದಿನ ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೈಸೂರಿನ ವರ್ತಕರು ಭಾನುವಾರದ ತಮ್ಮ ವ್ಯಾಪಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಆದ್ರೆ, ಒಂದು ದಿನದ ಲಾಕ್‌ಡೌನ್‌ನಿಂದ ಕೊರೊನಾ ಕಂಟ್ರೋಲ್‌ಗೆ ಬರುತ್ತಾ ಅನ್ನೋದೆ ಯಕ್ಷ ಪ್ರಶ್ನೆ.

Published On - 6:48 am, Mon, 15 June 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ