AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ […]

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2020 | 11:17 AM

Share

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ.

ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ ಪರಿಸ್ಥಿತಿ. ಇದೀಗ ಈ ಎರಡು ಮಾರುಕಟ್ಟೆಗಳನ್ನು ಪ್ರತಿ ಭಾನುವಾರ ಬಂದ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಹೌದು, ಮೈಸೂರಿನಲ್ಲಿ ಮಹಾಮಾರಿ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಒಂದು ಸಮಯದಲ್ಲಿ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಈಗ 20 ಆ್ಯಕ್ಟೀವ್ ಪ್ರಕರಣಗಳಿವೆ. ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದ ಬಂದವರಿಂದ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಈಗ ವರ್ತಕರು ಕೈ ಜೋಡಿಸಲು ಮುಂದಾಗಿದ್ದಾರೆ. ಸೋಮವಾರದಿಂದ ಶನಿವಾರದ ತನಕ ವ್ಯಾಪರ ನಡೆಸಿ, ಭಾನುವಾರ ಅಂಗಡಿಗಳು ಕ್ಲೋಸ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಸದ್ಯ, ಮೈಸೂರಿನಲ್ಲಿ 94 ಜನರು ಮಹಾಮಾರಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಪ್ರತಿದಿನ ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೈಸೂರಿನ ವರ್ತಕರು ಭಾನುವಾರದ ತಮ್ಮ ವ್ಯಾಪಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಆದ್ರೆ, ಒಂದು ದಿನದ ಲಾಕ್‌ಡೌನ್‌ನಿಂದ ಕೊರೊನಾ ಕಂಟ್ರೋಲ್‌ಗೆ ಬರುತ್ತಾ ಅನ್ನೋದೆ ಯಕ್ಷ ಪ್ರಶ್ನೆ.

Published On - 6:48 am, Mon, 15 June 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು