Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ […]

ಮತ್ತೆ ಬಾಲ ಬಿಚ್ಚಿರೋ ಹೆಮ್ಮಾರಿ ಕೊರೊನಾ ವಿರುದ್ಧ ಹೋರಾಡಲು ಅರಮನೆ ನಗರಿ ವರ್ತಕರು ಮಾಡಿದ್ದೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on:Jun 15, 2020 | 11:17 AM

ಮೈಸೂರು: ಆರಂಭದಲ್ಲಿ ಅರಮನೆ ನಗರಿಯಲ್ಲಿ ಕ್ರೂರಿ ಕೊರೊನಾ ಅಬ್ಬರಿಸಿತ್ತು. ನಂತರ ಫುಲ್‌ ಸೈಲೆಂಟ್ ಆಗಿದ್ದ ಹೆಮ್ಮಾರಿ ಮತ್ತೆ ಬಾಲ ಬಿಚ್ಚೋಕೆ ಶುರುಮಾಡಿದೆ. ಹೊರ ರಾಜ್ಯದ ನಂಟು ಸಾಂಸ್ಕೃತಿಕ ನಗರಿಯನ್ನ ಕಾಡುತ್ತಿದೆ. ಹೀಗಾಗಿ ಅಲ್ಲಿನ ವರ್ತಕರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ.

ಅಂಗಡಿಗಳು ಬಂದ್ ಆಗಿವೆ. ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳು ಫುಲ್ ಸೈಲೆಂಟ್‌ ಆಗಿವೆ. ಇದು ಮೈಸೂರಿನ ಹೃದಯಭಾಗದಲ್ಲಿರುವ ಶಿವರಾಂಪೇಟೆ ಹಾಗೂ ಸಂತೇಪೇಟೆ. ಮೈಸೂರಿನ ಎರಡು ಪ್ರಮುಖ ವಾಣಿಜ್ಯ ಅಂಗಡಿಗಳಿರುವ ಎರಡು ಪ್ರಮುಖ ಮಾರುಕಟ್ಟೆಗಳ ಪರಿಸ್ಥಿತಿ. ಇದೀಗ ಈ ಎರಡು ಮಾರುಕಟ್ಟೆಗಳನ್ನು ಪ್ರತಿ ಭಾನುವಾರ ಬಂದ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಹೌದು, ಮೈಸೂರಿನಲ್ಲಿ ಮಹಾಮಾರಿ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಒಂದು ಸಮಯದಲ್ಲಿ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಈಗ 20 ಆ್ಯಕ್ಟೀವ್ ಪ್ರಕರಣಗಳಿವೆ. ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದ ಬಂದವರಿಂದ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಈಗ ವರ್ತಕರು ಕೈ ಜೋಡಿಸಲು ಮುಂದಾಗಿದ್ದಾರೆ. ಸೋಮವಾರದಿಂದ ಶನಿವಾರದ ತನಕ ವ್ಯಾಪರ ನಡೆಸಿ, ಭಾನುವಾರ ಅಂಗಡಿಗಳು ಕ್ಲೋಸ್ ಮಾಡಲು ಇಲ್ಲಿನ ವರ್ತಕರು ನಿರ್ಧರಿಸಿದ್ದಾರೆ.

ಸದ್ಯ, ಮೈಸೂರಿನಲ್ಲಿ 94 ಜನರು ಮಹಾಮಾರಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಪ್ರತಿದಿನ ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೈಸೂರಿನ ವರ್ತಕರು ಭಾನುವಾರದ ತಮ್ಮ ವ್ಯಾಪಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಆದ್ರೆ, ಒಂದು ದಿನದ ಲಾಕ್‌ಡೌನ್‌ನಿಂದ ಕೊರೊನಾ ಕಂಟ್ರೋಲ್‌ಗೆ ಬರುತ್ತಾ ಅನ್ನೋದೆ ಯಕ್ಷ ಪ್ರಶ್ನೆ.

Published On - 6:48 am, Mon, 15 June 20

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ