AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಹೊಸ ವರ್ಷಕ್ಕೆ 2 ಲಕ್ಷ ಲಡ್ಡು

ಮೈಸೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. 2020ನ್ನು ಸ್ವಾಗತಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಹಾಗೇ ನ್ಯೂ ಇಯರ್ ಸೆಲಬ್ರೇಷನ್​ಗೆ ಡಿಫರೆಂಟ್ ಡಿಫರೆಂಟ್ ಪ್ಲ್ಯಾನ್ಸ್ ಮಾಡ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹೊಸ ವರ್ಷಾಚರಣೆಗೆ ಭರದ ಸಿದ್ಧತೆ ನಡೆದಿದ್ದು, ಲಕ್ಷಾಂತರ ಲಾಡುಗಳು ಸಿದ್ಧವಾಗಿವೆ. ಹೊಸ ವರ್ಷ ಬಂತೆಂದರೆ ಎಲ್ಲೆಡೆಯೂ ಸಂಭ್ರಮ ಮನೆಮಾಡಿರುತ್ತೆ. ಒಬ್ಬೊಬ್ಬರೂ ಒಂದೊಂದು ರೀತಿಯಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ತಾರೆ. ಹೀಗೆ ಮೈಸೂರಿನ ವಿಜಯನಗರದಲ್ಲಿರುವ ‘ಶ್ರೀ ಯೋಗ ನರಸಿಂಹ’ ಸ್ವಾಮಿ ದೇಗುಲದಲ್ಲಿ ಹೊಸವರ್ಷಾಚರಣೆಗೆ ಅಂತಾ 2 ಲಕ್ಷ ಲಡ್ಡುಗಳನ್ನ ತಯಾರಿಸಲಾಗಿದೆ. […]

ಯೋಗ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಹೊಸ ವರ್ಷಕ್ಕೆ 2 ಲಕ್ಷ ಲಡ್ಡು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 5:24 PM

Share

ಮೈಸೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. 2020ನ್ನು ಸ್ವಾಗತಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಹಾಗೇ ನ್ಯೂ ಇಯರ್ ಸೆಲಬ್ರೇಷನ್​ಗೆ ಡಿಫರೆಂಟ್ ಡಿಫರೆಂಟ್ ಪ್ಲ್ಯಾನ್ಸ್ ಮಾಡ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹೊಸ ವರ್ಷಾಚರಣೆಗೆ ಭರದ ಸಿದ್ಧತೆ ನಡೆದಿದ್ದು, ಲಕ್ಷಾಂತರ ಲಾಡುಗಳು ಸಿದ್ಧವಾಗಿವೆ.

ಹೊಸ ವರ್ಷ ಬಂತೆಂದರೆ ಎಲ್ಲೆಡೆಯೂ ಸಂಭ್ರಮ ಮನೆಮಾಡಿರುತ್ತೆ. ಒಬ್ಬೊಬ್ಬರೂ ಒಂದೊಂದು ರೀತಿಯಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ತಾರೆ. ಹೀಗೆ ಮೈಸೂರಿನ ವಿಜಯನಗರದಲ್ಲಿರುವ ‘ಶ್ರೀ ಯೋಗ ನರಸಿಂಹ’ ಸ್ವಾಮಿ ದೇಗುಲದಲ್ಲಿ ಹೊಸವರ್ಷಾಚರಣೆಗೆ ಅಂತಾ 2 ಲಕ್ಷ ಲಡ್ಡುಗಳನ್ನ ತಯಾರಿಸಲಾಗಿದೆ. ವರ್ಷದ ಮೊದಲ ದಿನದಂದೇ ಈ ಲಡ್ಡುಗಳನ್ನು ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ವಿತರಿಸಲಾಗುತ್ತೆ. ಜನವರಿ 1ರಂದು ಬೆಳಗ್ಗೆ 4 ಗಂಟೆಯಿಂದಲೇ ದೇವಸ್ಥಾನಕ್ಕೆ ಬರುವ ಪ್ರತಿಯೊಬ್ಬರಿಗೂ ಲಡ್ಡು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಒಟ್ಟು 50 ಬಾಣಸಿಗರ ಪರಿಶ್ರಮದಿಂದ ಲಡ್ಡು ತಯಾರಿಸಲಾಗಿದೆ. 50 ಕ್ವಿಂಟಾಲ್ ಕಡಲೇ ಹಿಟ್ಟು, 100 ಕೆಜಿ ಸಕ್ಕರೆ, 4000 ಲೀಟರ್ ಎಣ್ಣೆ, 100 ಕೆಜಿ ಗೋಡಂಬಿ, 100 ಕೆಜಿ ದ್ರಾಕ್ಷಿ, 20 ಕೆಜಿ ಏಲಕ್ಕಿ, 50 ಕೆಜಿ ಲವಂಗ, 20 ಕೆಜಿ ಬಾದಾಮಿಯನ್ನ ಲಡ್ಡು ತಯಾರಿಕೆಗೆ ಬಳಸಲಾಗಿದೆ. ಲಡ್ಡು ತಯಾರಿಕೆಯ ಸಂಪೂರ್ಣ ವೆಚ್ಚವನ್ನು ದೇವಸ್ಥಾನದ ಆಡಳಿತ ಮಂಡಳಿಯೇ ಭರಿಸಿದೆ. ವಿವಿಧ ಗಾತ್ರಗಳಲ್ಲಿ ಲಡ್ಡು ತಯಾರಿಸಲಾಗಿದ್ದು, ಇದಕ್ಕಾಗಿ ಬಾಣಸಿಗರು ಹಗಲು ರಾತ್ರಿ ಕೆಲಸ ಮಾಡಿದ್ದಾರೆ.

1994ರಿಂದಲೂ ಈ ದೇವಸ್ಥಾನದಲ್ಲಿ ಹೊಸ ವರ್ಷದಂದು ಭಕ್ತಾದಿಗಳಿಗೆ ಲಡ್ಡು ಹಂಚಲಾಗುತ್ತಿದೆ. 1000 ದಿಂದ ಆರಂಭವಾದ ಲಡ್ಡು ವಿತರಣೆ ಇವತ್ತು 2 ಲಕ್ಷ ತಲುಪಿದೆ. ಒಟ್ಟಾರೆ ಮೈಸೂರಿನ ಜನರು ಹೊಸ ವರ್ಷದಂದು ದೇವರ ಪ್ರಸಾದವಾಗಿ ಲಡ್ಡು ತಿಂದು ವರ್ಷಪೂರ್ತಿ ಸಿಹಿಯಾಗಿಯೇ ಜೀವನ ನಡೆಸಲಿ ಅನ್ನೋದೆ ಎಲ್ಲರ ಆಶಯ.

Published On - 4:57 pm, Tue, 31 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್