AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜತೆ ಅಕ್ರಮ ಸಂಬಂಧ: ಜಿ.ಪಂ ಅಧ್ಯಕ್ಷರ ಕಾರು ಚಾಲಕನ ಹತ್ಯೆ!

ಮೈಸೂರು: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕ ಸುನಿಲ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ರವಿಯ ಪತ್ನಿ ಜೊತೆ ಸುನಿಲ್ ಅಕ್ರಮ ಸಂಬಂಧ ಹೊಂದಿದ್ದನಂತೆ. ಹಾಗಾಗಿ ಚಾಲಕ ಸುನಿಲ್​ನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ರವಿ ತಪ್ಪು ಒಪ್ಪಿಕೊಂಡಿದ್ದಾನೆ. ಸುನಿಲ್ ಹಾಗೂ ರವಿ ಪತ್ನಿ ಮೊಬೈಲ್‌ನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದರು. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಇದ್ದಾಗ ಸಿಕ್ಕಿ ಬಿದ್ದಿದ್ದರು. ಈ ಬಗ್ಗೆ ಪತ್ನಿಗೆ ಹಾಗೂ ಸುನಿಲ್‌ಗೆ ಬುದ್ಧಿವಾದ ಹೇಳಿದ್ದೆ. ಆದರೆ ತನಗೆ ಪ್ರಭಾವಿಗಳ ಪರಿಚಯ ಇದೆ […]

ಪತ್ನಿ ಜತೆ ಅಕ್ರಮ ಸಂಬಂಧ: ಜಿ.ಪಂ ಅಧ್ಯಕ್ಷರ ಕಾರು ಚಾಲಕನ ಹತ್ಯೆ!
ಸಾಧು ಶ್ರೀನಾಥ್​
|

Updated on:Feb 10, 2020 | 11:01 AM

Share

ಮೈಸೂರು: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕ ಸುನಿಲ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ರವಿಯ ಪತ್ನಿ ಜೊತೆ ಸುನಿಲ್ ಅಕ್ರಮ ಸಂಬಂಧ ಹೊಂದಿದ್ದನಂತೆ. ಹಾಗಾಗಿ ಚಾಲಕ ಸುನಿಲ್​ನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ರವಿ ತಪ್ಪು ಒಪ್ಪಿಕೊಂಡಿದ್ದಾನೆ.

ಸುನಿಲ್ ಹಾಗೂ ರವಿ ಪತ್ನಿ ಮೊಬೈಲ್‌ನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದರು. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಇದ್ದಾಗ ಸಿಕ್ಕಿ ಬಿದ್ದಿದ್ದರು. ಈ ಬಗ್ಗೆ ಪತ್ನಿಗೆ ಹಾಗೂ ಸುನಿಲ್‌ಗೆ ಬುದ್ಧಿವಾದ ಹೇಳಿದ್ದೆ. ಆದರೆ ತನಗೆ ಪ್ರಭಾವಿಗಳ ಪರಿಚಯ ಇದೆ ಎಂದು ಸುನಿಲ್ ಮಾತು ಕೇಳುತ್ತಿರಲಿಲ್ಲ. ಇವರಿಬ್ಬರ ಬಗ್ಗೆ ಊರಿನಲ್ಲಿ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ನನಗೆ ಅವಮಾನವಾಗಿತ್ತು. ಇದೇ ಕೋಪಕ್ಕೆ ಸುನಿಲ್​ನನ್ನು ಹತ್ಯೆ ಮಾಡಿದೆ ಎಂದು ರವಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಹಲ್ಲೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ: ಎರಡು‌ ದಿನದ ಹಿಂದೆ ಸುನಿಲ್, ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಬೇಕರಿಯೊಂದರಲ್ಲಿದ್ದಾಗ ಮಚ್ಚಿನಿಂದ ಕೊಚ್ಚಿ ರವಿ ಹತ್ಯೆ ಮಾಡಿದ್ದ. ಚಾಲಕ ಸುನಿಲ್ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ‌ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಹಲ್ಲೆಯ ಭೀಕರ ದೃಶ್ಯ ಬೇಕರಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ರವಿ ಈಗಾಗಲೇ ಬೀಚನಹಳ್ಳಿ ಪೊಲೀಸರ ವಶದಲ್ಲಿದ್ದಾನೆ.

Published On - 10:52 am, Mon, 10 February 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ