AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣೀರು ಸುರಿಸಿ ಸುರಿಸೀ.. HDKಯಿಂದ ಜನರ‌ ಭಾವನೆ ದುರುಪಯೋಗ’

ಮಂಡ್ಯ: ಯಾವಾಗಲಾದ್ರು ಒಮ್ಮೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಚುನಾವಣೆ‌ ಸಮಯದಲ್ಲಿಯೇ ಕಣ್ಣೀರು ಹಾಕೋದು ಅವರಿಗೆ ಸಾಮಾನ್ಯವಾಗಿಬಿಟ್ಟಿದೆ. ಕಣ್ಣೀರಿಗೆ ಮಹತ್ವ ಸಿಗಲ್ಲ ಅನ್ನುವುದೂ ಅವರಿಗೆ ಅರ್ಥವಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿಯನ್ನು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಛೇಡಿಸಿದ್ದಾರೆ. ಕೆ ಆರ್ ಪೇಟೆ ಉಪ‌ ಚುನಾವಣೆ ಪ್ರಚಾರದ ವೇಳೆ ತಮ್ಮ ಪುತ್ರನ ಸೋಲನ್ನು ಪ್ರಸ್ತಾಪಿಸುತ್ತಾ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಿನ್ನೆ ಕಣ್ಣೀರು ಹಾಕಿದ್ದರು. ಅವರು ಅಳುವುದು ಭಾವನಾತ್ಮಕವಾಗಿಯಂತೂ ಅಲ್ಲ. ಅಳುವಂತಹದ್ದು ಅವರಿಗೆ ಏನೂ ಆಗಿಲ್ಲ. […]

‘ಕಣ್ಣೀರು ಸುರಿಸಿ ಸುರಿಸೀ.. HDKಯಿಂದ ಜನರ‌ ಭಾವನೆ ದುರುಪಯೋಗ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 6:25 PM

Share

ಮಂಡ್ಯ: ಯಾವಾಗಲಾದ್ರು ಒಮ್ಮೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಚುನಾವಣೆ‌ ಸಮಯದಲ್ಲಿಯೇ ಕಣ್ಣೀರು ಹಾಕೋದು ಅವರಿಗೆ ಸಾಮಾನ್ಯವಾಗಿಬಿಟ್ಟಿದೆ. ಕಣ್ಣೀರಿಗೆ ಮಹತ್ವ ಸಿಗಲ್ಲ ಅನ್ನುವುದೂ ಅವರಿಗೆ ಅರ್ಥವಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿಯನ್ನು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಛೇಡಿಸಿದ್ದಾರೆ. ಕೆ ಆರ್ ಪೇಟೆ ಉಪ‌ ಚುನಾವಣೆ ಪ್ರಚಾರದ ವೇಳೆ ತಮ್ಮ ಪುತ್ರನ ಸೋಲನ್ನು ಪ್ರಸ್ತಾಪಿಸುತ್ತಾ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಿನ್ನೆ ಕಣ್ಣೀರು ಹಾಕಿದ್ದರು.

ಅವರು ಅಳುವುದು ಭಾವನಾತ್ಮಕವಾಗಿಯಂತೂ ಅಲ್ಲ. ಅಳುವಂತಹದ್ದು ಅವರಿಗೆ ಏನೂ ಆಗಿಲ್ಲ. ಅವ್ರು ಜನರ‌ ಭಾವನೆಯನ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಅನ್ಸುತ್ತೆ. ಕಣ್ಣೀರು ಹಾಕೋದು, ನಾಟಕ ಮಾಡೋದು, ಎಲ್ಲವನ್ನು‌‌‌‌ ನೋಡಿ ನೋಡಿ‌‌ ಜನಕ್ಕೆ ಸಾಕಾಗಿದೆ. ಅವರ ತಂದೆ ತುಮಕೂರಿಗೆ ಹೋಗಿ ಸೋತಿರೋ ಬಗ್ಗೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಒಮ್ಮೆ ಸೋತಿರೊ‌ ಮಗನಿಗಾಗಿಯೂ ಕಣ್ಣೀರು ಹಾಕ್ತಾರೆ. ಈ ಸಂದರ್ಭದಲ್ಲಿಯಾ ಅವ್ರು ಅಳಿವು-ಉಳಿವಿನ ಬಗ್ಗೆ ಮಾತನಾಡೋದಾ? ಇದೇನು ಸಾರ್ವತ್ರಿಕ ಚುನಾವಣೆಯೇ? ಎಂದು ಹೆಚ್​ಡಿಕೆ ಕಣ್ಣಿರಿನ ಬಗ್ಗೆ ಚಲುವರಾಯಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಅವರು ಅಧಿಕಾರ ಕಳೆದುಕೊಳ್ಳಲು ಅವರೇ ಕಾರಣ. ಜಿಲ್ಲೆಯ ಜನರು ಅವರಿಗೆ ಅಧಿಕಾರ ನೀಡಿದ್ದರು. ಆದ್ರೆ ಅದನ್ನ ಉಳಿಸಿಕೊಳ್ಳಲಿಲ್ಲ. ಪೂರ್ತಿ ಸಾಲಮನ್ನಾ ಮಾಡ್ತೀನಿ ಅಂದ್ರು, ಮಾಡುದ್ರಾ? ಇನ್ನು, ಮಂಡ್ಯ ಷುಗರ್ ಕಾರ್ಖಾನೆ ನಿಲ್ಲಲು ಅವರೇ ಕಾರಣ. ವೈಯಕ್ತಿಕವಾಗಿ ಆಗಲಿ, ರಾಜಕೀಯವಾಗಿ ಆಗಲಿ ಕುಮಾರಸ್ವಾಮಿ ಮೇಲೆ ದ್ವೇಷ ಇಲ್ಲ. ಅವರು ನನ್ನನ್ನು ಸ್ನೇಹಿತ ಅಂತ ಒಪ್ಕೊಂಡ್ರೆ ಖುಷಿಯೇ. ಸಾಧ್ಯವಾದ್ರೆ ಅವರು ನಮ್ಮ ಪಕ್ಷಕ್ಕೆ ಸಹಾಯ ಮಾಡಲಿ. ಕೆ‌ಆರ್ ಪೇಟೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಹಿಂಪಡೆದು, ಕಾಂಗ್ರೆಸ್ ಗೆ ಸಹಾಯ ಮಾಡಲಿ ಎಂದು ಚಲುವರಾಯಸ್ವಾಮಿ ಆಶಿಸಿದರು.

Published On - 6:25 pm, Thu, 28 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ