AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣೀರು ಸುರಿಸಿ ಸುರಿಸೀ.. HDKಯಿಂದ ಜನರ‌ ಭಾವನೆ ದುರುಪಯೋಗ’

ಮಂಡ್ಯ: ಯಾವಾಗಲಾದ್ರು ಒಮ್ಮೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಚುನಾವಣೆ‌ ಸಮಯದಲ್ಲಿಯೇ ಕಣ್ಣೀರು ಹಾಕೋದು ಅವರಿಗೆ ಸಾಮಾನ್ಯವಾಗಿಬಿಟ್ಟಿದೆ. ಕಣ್ಣೀರಿಗೆ ಮಹತ್ವ ಸಿಗಲ್ಲ ಅನ್ನುವುದೂ ಅವರಿಗೆ ಅರ್ಥವಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿಯನ್ನು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಛೇಡಿಸಿದ್ದಾರೆ. ಕೆ ಆರ್ ಪೇಟೆ ಉಪ‌ ಚುನಾವಣೆ ಪ್ರಚಾರದ ವೇಳೆ ತಮ್ಮ ಪುತ್ರನ ಸೋಲನ್ನು ಪ್ರಸ್ತಾಪಿಸುತ್ತಾ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಿನ್ನೆ ಕಣ್ಣೀರು ಹಾಕಿದ್ದರು. ಅವರು ಅಳುವುದು ಭಾವನಾತ್ಮಕವಾಗಿಯಂತೂ ಅಲ್ಲ. ಅಳುವಂತಹದ್ದು ಅವರಿಗೆ ಏನೂ ಆಗಿಲ್ಲ. […]

‘ಕಣ್ಣೀರು ಸುರಿಸಿ ಸುರಿಸೀ.. HDKಯಿಂದ ಜನರ‌ ಭಾವನೆ ದುರುಪಯೋಗ’
ಸಾಧು ಶ್ರೀನಾಥ್​
|

Updated on:Nov 28, 2019 | 6:25 PM

Share

ಮಂಡ್ಯ: ಯಾವಾಗಲಾದ್ರು ಒಮ್ಮೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಚುನಾವಣೆ‌ ಸಮಯದಲ್ಲಿಯೇ ಕಣ್ಣೀರು ಹಾಕೋದು ಅವರಿಗೆ ಸಾಮಾನ್ಯವಾಗಿಬಿಟ್ಟಿದೆ. ಕಣ್ಣೀರಿಗೆ ಮಹತ್ವ ಸಿಗಲ್ಲ ಅನ್ನುವುದೂ ಅವರಿಗೆ ಅರ್ಥವಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿಯನ್ನು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಛೇಡಿಸಿದ್ದಾರೆ. ಕೆ ಆರ್ ಪೇಟೆ ಉಪ‌ ಚುನಾವಣೆ ಪ್ರಚಾರದ ವೇಳೆ ತಮ್ಮ ಪುತ್ರನ ಸೋಲನ್ನು ಪ್ರಸ್ತಾಪಿಸುತ್ತಾ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಿನ್ನೆ ಕಣ್ಣೀರು ಹಾಕಿದ್ದರು.

ಅವರು ಅಳುವುದು ಭಾವನಾತ್ಮಕವಾಗಿಯಂತೂ ಅಲ್ಲ. ಅಳುವಂತಹದ್ದು ಅವರಿಗೆ ಏನೂ ಆಗಿಲ್ಲ. ಅವ್ರು ಜನರ‌ ಭಾವನೆಯನ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಅನ್ಸುತ್ತೆ. ಕಣ್ಣೀರು ಹಾಕೋದು, ನಾಟಕ ಮಾಡೋದು, ಎಲ್ಲವನ್ನು‌‌‌‌ ನೋಡಿ ನೋಡಿ‌‌ ಜನಕ್ಕೆ ಸಾಕಾಗಿದೆ. ಅವರ ತಂದೆ ತುಮಕೂರಿಗೆ ಹೋಗಿ ಸೋತಿರೋ ಬಗ್ಗೆ ಕಣ್ಣೀರು ಹಾಕಿದ್ರೆ ಪರವಾಗಿಲ್ಲ. ಆದ್ರೆ ಒಮ್ಮೆ ಸೋತಿರೊ‌ ಮಗನಿಗಾಗಿಯೂ ಕಣ್ಣೀರು ಹಾಕ್ತಾರೆ. ಈ ಸಂದರ್ಭದಲ್ಲಿಯಾ ಅವ್ರು ಅಳಿವು-ಉಳಿವಿನ ಬಗ್ಗೆ ಮಾತನಾಡೋದಾ? ಇದೇನು ಸಾರ್ವತ್ರಿಕ ಚುನಾವಣೆಯೇ? ಎಂದು ಹೆಚ್​ಡಿಕೆ ಕಣ್ಣಿರಿನ ಬಗ್ಗೆ ಚಲುವರಾಯಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಅವರು ಅಧಿಕಾರ ಕಳೆದುಕೊಳ್ಳಲು ಅವರೇ ಕಾರಣ. ಜಿಲ್ಲೆಯ ಜನರು ಅವರಿಗೆ ಅಧಿಕಾರ ನೀಡಿದ್ದರು. ಆದ್ರೆ ಅದನ್ನ ಉಳಿಸಿಕೊಳ್ಳಲಿಲ್ಲ. ಪೂರ್ತಿ ಸಾಲಮನ್ನಾ ಮಾಡ್ತೀನಿ ಅಂದ್ರು, ಮಾಡುದ್ರಾ? ಇನ್ನು, ಮಂಡ್ಯ ಷುಗರ್ ಕಾರ್ಖಾನೆ ನಿಲ್ಲಲು ಅವರೇ ಕಾರಣ. ವೈಯಕ್ತಿಕವಾಗಿ ಆಗಲಿ, ರಾಜಕೀಯವಾಗಿ ಆಗಲಿ ಕುಮಾರಸ್ವಾಮಿ ಮೇಲೆ ದ್ವೇಷ ಇಲ್ಲ. ಅವರು ನನ್ನನ್ನು ಸ್ನೇಹಿತ ಅಂತ ಒಪ್ಕೊಂಡ್ರೆ ಖುಷಿಯೇ. ಸಾಧ್ಯವಾದ್ರೆ ಅವರು ನಮ್ಮ ಪಕ್ಷಕ್ಕೆ ಸಹಾಯ ಮಾಡಲಿ. ಕೆ‌ಆರ್ ಪೇಟೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಹಿಂಪಡೆದು, ಕಾಂಗ್ರೆಸ್ ಗೆ ಸಹಾಯ ಮಾಡಲಿ ಎಂದು ಚಲುವರಾಯಸ್ವಾಮಿ ಆಶಿಸಿದರು.

Published On - 6:25 pm, Thu, 28 November 19

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌