AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಲವ್​ ಸ್ಟೋರಿ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!
ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 8:38 PM

Share

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಈಗ ಒಟ್ಟಾಗಿ ಲವ್​ ಸ್ಟೋರಿ ಹೇಳೋಕೆ ಮುಂದೆ ಬಂದಿದ್ದಾರೆ! ತಮ್ಮ ಪ್ರೇಮ ಕಹಾನಿ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಹಾಗಾಂತ ಇದು ನಿಜ ಜೀವನದ ವಿಚಾರವಲ್ಲ! ಇದು ತೆರೆ ಮೇಲಿನ ಕತೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘ಲವ್​ ಸ್ಟೋರಿ’ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೇವಂತ್ ಹೆಸರಿನ ಪಾತ್ರದಲ್ಲಿ ನಾಗ ಚೈತನ್ಯ ಕಾಣಿಸಿಕೊಂಡರೆ, ಮೌನಿಕಾ ಪಾತ್ರಕ್ಕೆ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ. ಲವ್​ ಸ್ಟೋರಿ ಹೇಗಿರಲಿದೆ ಎನ್ನುವ ಚಿಕ್ಕ ಗುಟ್ಟನ್ನು ನಿರ್ದೇಶಕ ಶೇಖರ್ ಕಮ್ಮುಲ ಬಿಟ್ಟುಕೊಟ್ಟಿದ್ದಾರೆ. ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ರೇವಂತ್​ ಹಾಗೂ ಮೌನಿಕಾ ನಗರಕ್ಕೆ ಬರುತ್ತಾರೆ. ರೇವಂತ್​ ಟೆರೇಸ್​ ಮೇಲೆ ಜಿಮ್​ ನಡೆಸಿದರೆ, ಮೌನಿಕಾ ಸಾಫ್ಟ್​ವೇರ್​ ಕೆಲಸಕ್ಕಾಗಿ ಕಂಪೆನಿಯಿಂದ ಕಂಪೆನಿಗೆ ಅಲೆಯುತ್ತಿರುತ್ತಾಳೆ. ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದು ಚಿತ್ರದ ಒಂದೆಳೆ ಅನ್ನೋದು ಟೀಸರ್​ನಲ್ಲಿ ಗೊತ್ತಾಗುತ್ತದೆ.

ಮೌನಿಕಾಗೆ ಐಟಿ ಕೆಲಸಕ್ಕಿಂತ ನೃತ್ಯದ ಮೇಲೆ ಹೆಚ್ಚು ಆಸಕ್ತಿ ಎಂಬುದನ್ನು ನಿರ್ದೇಶಕರು ಸೂಕ್ಷ್ಮವಾಗಿ ಟೀಸರ್​ನಲ್ಲಿ ಹೇಳಿದ್ದಾರೆ. ನಾಗ ಚೈತನ್ಯ ನಟನೆಯ ಮಜಲಿ ಸಿನಿಮಾ ತುಂಬಾನೇ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅದರಲ್ಲಿದ್ದ ಪ್ರೀತಿ ಕತೆಯೇ ಸಿನಿಮಾ ಯಶಸ್ಸಿಗೆ ಕಾರಣವಾಗಿತ್ತು. ಈಗ ಅಂತಹುದೇ ಎಳೆ ಹಿಡಿದು ಅವರು ತೆರೆಮೇಲೆ ಬರುತ್ತಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ