Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಲವ್​ ಸ್ಟೋರಿ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!
ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 10, 2021 | 8:38 PM

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಈಗ ಒಟ್ಟಾಗಿ ಲವ್​ ಸ್ಟೋರಿ ಹೇಳೋಕೆ ಮುಂದೆ ಬಂದಿದ್ದಾರೆ! ತಮ್ಮ ಪ್ರೇಮ ಕಹಾನಿ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಹಾಗಾಂತ ಇದು ನಿಜ ಜೀವನದ ವಿಚಾರವಲ್ಲ! ಇದು ತೆರೆ ಮೇಲಿನ ಕತೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘ಲವ್​ ಸ್ಟೋರಿ’ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೇವಂತ್ ಹೆಸರಿನ ಪಾತ್ರದಲ್ಲಿ ನಾಗ ಚೈತನ್ಯ ಕಾಣಿಸಿಕೊಂಡರೆ, ಮೌನಿಕಾ ಪಾತ್ರಕ್ಕೆ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ. ಲವ್​ ಸ್ಟೋರಿ ಹೇಗಿರಲಿದೆ ಎನ್ನುವ ಚಿಕ್ಕ ಗುಟ್ಟನ್ನು ನಿರ್ದೇಶಕ ಶೇಖರ್ ಕಮ್ಮುಲ ಬಿಟ್ಟುಕೊಟ್ಟಿದ್ದಾರೆ. ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ರೇವಂತ್​ ಹಾಗೂ ಮೌನಿಕಾ ನಗರಕ್ಕೆ ಬರುತ್ತಾರೆ. ರೇವಂತ್​ ಟೆರೇಸ್​ ಮೇಲೆ ಜಿಮ್​ ನಡೆಸಿದರೆ, ಮೌನಿಕಾ ಸಾಫ್ಟ್​ವೇರ್​ ಕೆಲಸಕ್ಕಾಗಿ ಕಂಪೆನಿಯಿಂದ ಕಂಪೆನಿಗೆ ಅಲೆಯುತ್ತಿರುತ್ತಾಳೆ. ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದು ಚಿತ್ರದ ಒಂದೆಳೆ ಅನ್ನೋದು ಟೀಸರ್​ನಲ್ಲಿ ಗೊತ್ತಾಗುತ್ತದೆ.

ಮೌನಿಕಾಗೆ ಐಟಿ ಕೆಲಸಕ್ಕಿಂತ ನೃತ್ಯದ ಮೇಲೆ ಹೆಚ್ಚು ಆಸಕ್ತಿ ಎಂಬುದನ್ನು ನಿರ್ದೇಶಕರು ಸೂಕ್ಷ್ಮವಾಗಿ ಟೀಸರ್​ನಲ್ಲಿ ಹೇಳಿದ್ದಾರೆ. ನಾಗ ಚೈತನ್ಯ ನಟನೆಯ ಮಜಲಿ ಸಿನಿಮಾ ತುಂಬಾನೇ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅದರಲ್ಲಿದ್ದ ಪ್ರೀತಿ ಕತೆಯೇ ಸಿನಿಮಾ ಯಶಸ್ಸಿಗೆ ಕಾರಣವಾಗಿತ್ತು. ಈಗ ಅಂತಹುದೇ ಎಳೆ ಹಿಡಿದು ಅವರು ತೆರೆಮೇಲೆ ಬರುತ್ತಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!