AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಲವ್​ ಸ್ಟೋರಿ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!
ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 8:38 PM

Share

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಈಗ ಒಟ್ಟಾಗಿ ಲವ್​ ಸ್ಟೋರಿ ಹೇಳೋಕೆ ಮುಂದೆ ಬಂದಿದ್ದಾರೆ! ತಮ್ಮ ಪ್ರೇಮ ಕಹಾನಿ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಹಾಗಾಂತ ಇದು ನಿಜ ಜೀವನದ ವಿಚಾರವಲ್ಲ! ಇದು ತೆರೆ ಮೇಲಿನ ಕತೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘ಲವ್​ ಸ್ಟೋರಿ’ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೇವಂತ್ ಹೆಸರಿನ ಪಾತ್ರದಲ್ಲಿ ನಾಗ ಚೈತನ್ಯ ಕಾಣಿಸಿಕೊಂಡರೆ, ಮೌನಿಕಾ ಪಾತ್ರಕ್ಕೆ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ. ಲವ್​ ಸ್ಟೋರಿ ಹೇಗಿರಲಿದೆ ಎನ್ನುವ ಚಿಕ್ಕ ಗುಟ್ಟನ್ನು ನಿರ್ದೇಶಕ ಶೇಖರ್ ಕಮ್ಮುಲ ಬಿಟ್ಟುಕೊಟ್ಟಿದ್ದಾರೆ. ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ರೇವಂತ್​ ಹಾಗೂ ಮೌನಿಕಾ ನಗರಕ್ಕೆ ಬರುತ್ತಾರೆ. ರೇವಂತ್​ ಟೆರೇಸ್​ ಮೇಲೆ ಜಿಮ್​ ನಡೆಸಿದರೆ, ಮೌನಿಕಾ ಸಾಫ್ಟ್​ವೇರ್​ ಕೆಲಸಕ್ಕಾಗಿ ಕಂಪೆನಿಯಿಂದ ಕಂಪೆನಿಗೆ ಅಲೆಯುತ್ತಿರುತ್ತಾಳೆ. ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದು ಚಿತ್ರದ ಒಂದೆಳೆ ಅನ್ನೋದು ಟೀಸರ್​ನಲ್ಲಿ ಗೊತ್ತಾಗುತ್ತದೆ.

ಮೌನಿಕಾಗೆ ಐಟಿ ಕೆಲಸಕ್ಕಿಂತ ನೃತ್ಯದ ಮೇಲೆ ಹೆಚ್ಚು ಆಸಕ್ತಿ ಎಂಬುದನ್ನು ನಿರ್ದೇಶಕರು ಸೂಕ್ಷ್ಮವಾಗಿ ಟೀಸರ್​ನಲ್ಲಿ ಹೇಳಿದ್ದಾರೆ. ನಾಗ ಚೈತನ್ಯ ನಟನೆಯ ಮಜಲಿ ಸಿನಿಮಾ ತುಂಬಾನೇ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅದರಲ್ಲಿದ್ದ ಪ್ರೀತಿ ಕತೆಯೇ ಸಿನಿಮಾ ಯಶಸ್ಸಿಗೆ ಕಾರಣವಾಗಿತ್ತು. ಈಗ ಅಂತಹುದೇ ಎಳೆ ಹಿಡಿದು ಅವರು ತೆರೆಮೇಲೆ ಬರುತ್ತಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!

Follow Us
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!