AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಲವ್​ ಸ್ಟೋರಿ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

Love Story ಹೇಳೋಕೆ ಬಂದ್ರು ನಾಗ ಚೈತನ್ಯ-ಸಾಯಿ ಪಲ್ಲವಿ!
ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 8:38 PM

Share

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಈಗ ಒಟ್ಟಾಗಿ ಲವ್​ ಸ್ಟೋರಿ ಹೇಳೋಕೆ ಮುಂದೆ ಬಂದಿದ್ದಾರೆ! ತಮ್ಮ ಪ್ರೇಮ ಕಹಾನಿ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಹಾಗಾಂತ ಇದು ನಿಜ ಜೀವನದ ವಿಚಾರವಲ್ಲ! ಇದು ತೆರೆ ಮೇಲಿನ ಕತೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘ಲವ್​ ಸ್ಟೋರಿ’ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದೆ. ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೇವಂತ್ ಹೆಸರಿನ ಪಾತ್ರದಲ್ಲಿ ನಾಗ ಚೈತನ್ಯ ಕಾಣಿಸಿಕೊಂಡರೆ, ಮೌನಿಕಾ ಪಾತ್ರಕ್ಕೆ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ. ಲವ್​ ಸ್ಟೋರಿ ಹೇಗಿರಲಿದೆ ಎನ್ನುವ ಚಿಕ್ಕ ಗುಟ್ಟನ್ನು ನಿರ್ದೇಶಕ ಶೇಖರ್ ಕಮ್ಮುಲ ಬಿಟ್ಟುಕೊಟ್ಟಿದ್ದಾರೆ. ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ರೇವಂತ್​ ಹಾಗೂ ಮೌನಿಕಾ ನಗರಕ್ಕೆ ಬರುತ್ತಾರೆ. ರೇವಂತ್​ ಟೆರೇಸ್​ ಮೇಲೆ ಜಿಮ್​ ನಡೆಸಿದರೆ, ಮೌನಿಕಾ ಸಾಫ್ಟ್​ವೇರ್​ ಕೆಲಸಕ್ಕಾಗಿ ಕಂಪೆನಿಯಿಂದ ಕಂಪೆನಿಗೆ ಅಲೆಯುತ್ತಿರುತ್ತಾಳೆ. ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದು ಚಿತ್ರದ ಒಂದೆಳೆ ಅನ್ನೋದು ಟೀಸರ್​ನಲ್ಲಿ ಗೊತ್ತಾಗುತ್ತದೆ.

ಮೌನಿಕಾಗೆ ಐಟಿ ಕೆಲಸಕ್ಕಿಂತ ನೃತ್ಯದ ಮೇಲೆ ಹೆಚ್ಚು ಆಸಕ್ತಿ ಎಂಬುದನ್ನು ನಿರ್ದೇಶಕರು ಸೂಕ್ಷ್ಮವಾಗಿ ಟೀಸರ್​ನಲ್ಲಿ ಹೇಳಿದ್ದಾರೆ. ನಾಗ ಚೈತನ್ಯ ನಟನೆಯ ಮಜಲಿ ಸಿನಿಮಾ ತುಂಬಾನೇ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅದರಲ್ಲಿದ್ದ ಪ್ರೀತಿ ಕತೆಯೇ ಸಿನಿಮಾ ಯಶಸ್ಸಿಗೆ ಕಾರಣವಾಗಿತ್ತು. ಈಗ ಅಂತಹುದೇ ಎಳೆ ಹಿಡಿದು ಅವರು ತೆರೆಮೇಲೆ ಬರುತ್ತಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​