AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ. ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆ […]

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!
ಆಯೇಷಾ ಬಾನು
|

Updated on:Jul 01, 2020 | 9:43 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ.

ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆ ನಡುರಾತ್ರಿಯೇ ಸೋಂಕಿತನನ್ನು ಬೀದಿಗೆ ತಳ್ಳಿದೆ. ರೋಗಿ ಮೂರ್ನಾಲ್ಕು ಗಂಟೆ ಌಂಬುಲೆನ್ಸ್​ನಲ್ಲಿ ನರಳಾಡಿದ್ದಾರೆ. ಈ ಅಮಾನವೀಯ ಘಟನೆಗೆ ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೆಡ್ ಇಲ್ಲ ಅಂತ ಹೇಳಿ ಸತತ ಮೂರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ್ದಾರೆ. ಕೊನೆಗೆ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೇ ದಿನಕ್ಕೆ 1 ಲಕ್ಷ ವಸೂಲಿ ಅಲ್ಲದೆ ಎರಡೇ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದೆ. ಐಸಿಯು ಚಾರ್ಜ್ 1ದಿನಕ್ಕೆ 35 ಸಾವಿರ ವಸೂಲಿ ಮಾಡಿದ್ದಾರೆಂದು ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರ ಆರೋಪಿಸಿದ್ದಾರೆ.

Published On - 9:28 am, Wed, 1 July 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ