AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra: ಬ್ರಹ್ಮಾಸ್ತ್ರ ಚಿತ್ರೀಕರಣ ಪೂರ್ಣ; ಆಲಿಯಾ ಮತ್ತು ರಣ್​ಬೀರ್ ಜತೆ ಫೋಟೊ ಹಂಚಿಕೊಂಡ ನಾಗಾರ್ಜುನ

Actor Nagarjuna Akkineni: ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಬ್ರಹ್ಮಾಸ್ತ್ರ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ.

Brahmastra: ಬ್ರಹ್ಮಾಸ್ತ್ರ ಚಿತ್ರೀಕರಣ ಪೂರ್ಣ; ಆಲಿಯಾ ಮತ್ತು ರಣ್​ಬೀರ್ ಜತೆ ಫೋಟೊ ಹಂಚಿಕೊಂಡ ನಾಗಾರ್ಜುನ
ಆಲಿಯಾ, ರಣ್​ಬೀರ್, ಅಯಾನ್ ಮುಖರ್ಜಿ ಜತೆ ನಾಗಾರ್ಜುನ
Follow us
ರಶ್ಮಿ ಕಲ್ಲಕಟ್ಟ
|

Updated on: Feb 16, 2021 | 1:15 PM

ಮುಂಬೈ: ಬಾಲಿವುಡ್​ನ ಬಹುನಿರೀಕ್ಷಿತ ಚಿತ್ರ ಬ್ರಹ್ಮಾಸ್ತ್ರದಲ್ಲಿನ ಚಿತ್ರೀಕರಣ ಪೂರ್ತಿಗೊಳಿಸಿರುವ ನಟ ನಾಗಾರ್ಜುನ ಆಲಿಯಾ ಭಟ್, ರಣ್​ಬೀರ್ ಕಪೂರ್ ಮತ್ತು ನಿರ್ದೇಶಕ ಅಯಾನ್ ಮುಖರ್ಜಿ ಜತೆಗಿರುವ ಫೋಟೊ ಶೇರ್ ಮಾಡಿದ್ದಾರೆ. ಆಲಿಯಾ-ರಣ್​ಬೀರ್ ಜತೆ ಅಮಿತಾಬ್ ಬಚ್ಚನ್, ಡಿಂಪಲ್ ಕಪಾಡಿಯಾ ಮತ್ತು ಮೌನಿ ರಾಯ್ ಈ ಸಿನಿಮಾದಲ್ಲಿ ನಟಿಸುತ್ತಿದ್ದು ಮುಂಬೈನಲ್ಲಿ ಶೂಟಿಂಗ್ ಪೂರ್ಣಗೊಂಡಿದೆ.

ತೆಲುಗು ಚಿತ್ರ ಮನ್ಮಥಡು 2ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿರುವ ನಾಗಾರ್ಜುನ ಅಕ್ಕಿನೇನಿ ಮುಂಬರುವ ಬಾಲಿವುಡ್ ಸಿನಿಮಾ ಬ್ರಹ್ಮಾಸ್ತ್ರದ ಬಗ್ಗೆ ಫುಲ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಫೋಟೊ ಟ್ವೀಟ್ ಮಾಡಿರುವ ನಾಗಾರ್ಜುನ, ರಣ್​ಬೀರ್ ಮತ್ತು ಆಲಿಯಾ ಜತೆಗಿನ ಅನುಭವ ಉತ್ತಮವಾಗಿತ್ತು. ಅಯಾನ್ ಮುಖರ್ಜಿ ಸೃಷ್ಟಿಸಿದ ಅದ್ಭುತ ಜಗತ್ತನ್ನು ನೋಡಲು ಕಾಯುತ್ತಿರುತ್ತೇನೆ ಎಂದಿದ್ದಾರೆ.

ವರ್ಷಗಳ ಹಿಂದೆಯೇ ಶೂಟಿಂಗ್ ಆರಂಭಿಸಿದ್ದ ಬ್ರಹ್ಮಾಸ್ತ್ರ ಈ ವರ್ಷ ತೆರೆಕಾಣುವ ನಿರೀಕ್ಷೆಯಿದೆ. ಆಲಿಯಾ ಮತ್ತು ರಣ್​ಬೀರ್ ಕಪೂರ್ ಜೋಡಿಯ ಮೊದಲ ಸಿನಿಮಾ ಇದಾಗಿದ್ದು ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ವೇಕ್ ಅಪ್ ಸಿದ್, ಯೇ ಜವಾನಿ ಹೈ ದಿವಾನಿ ಚಿತ್ರಗಳನ್ನು ನಿರ್ದೇಶಿಸಿದ್ದ ಅಯಾನ್ ಮುಖರ್ಜಿ ಬ್ರಹ್ಮಾಸ್ತ್ರಕ್ಕೆ ಆಕ್ಷನ್- ಕಟ್ ಹೇಳಿದ್ದಾರೆ.

ಇದನ್ನೂ ಓದಿ:ಬ್ರಹ್ಮಾಸ್ತ್ರ ಮೂಲಕ ಚಂದನವನಕ್ಕೆ ಬರ್ತಿದ್ದಾರೆ ಬಿಟೌನ್ ಬ್ಯೂಟಿ ಆಲಿಯಾ ಭಟ್

ಸಿನಿಮಾ ತೆರೆ ಕಾಣಲು ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಆಲಿಯಾ ಭಟ್, ಇದೊಂದು ವಿಭಿನ್ನ ಚಿತ್ರ. ಉತ್ತಮ ಚಿತ್ರ ಹೆಚ್ಚು ಸಮಯವನ್ನು ಬೇಡುತ್ತದೆ ಎಂದಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ.

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ