AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಠಾಣ JDS ಶಾಸಕರಿಗೆ ಗುಂಡು ಹಾರಿಸಿ.. ಹತ್ಯೆ ಬೆದರಿಕೆ

ವಿಜಯಪುರ: ಜಿಲ್ಲೆಯ ನಾಗಠಾಣ ಕ್ಷೇತ್ರದ JDS ಶಾಸಕರಿಗೆ ಗುಂಡು ಹಾರಿಸಿ ಹತ್ಯೆ ಬೆದರಿಕೆ ಮಾಡಿರುವ ಘಟನೆ ವರದಿಯಾಗಿದೆ. ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್​ಗೆ ಜೀವಬೆದರಿಕೆ ಒಡ್ಡಲಾಗಿದೆ. ಜೊತೆಗೆ, ಕೆಲ ದುಷ್ಕರ್ಮಿಗಳು ನಡೆಸಿರುವ ಅಕ್ರಮಗಳನ್ನು ಪ್ರಶ್ನಿಸಿ ಅವರ ಕೃತ್ಯ ಬಹಿರಂಗಪಡಿಸಿದ್ದಕ್ಕೆ ಈ ರೀತಿ ಬೆದರಿಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದಾರೆ. ಶಾಸಕರಿಗೆ ಇದೆಯಾ ಜೀವ‌ ಬೆದರಿಕೆ? ಕಳೆದ ನವೆಂಬರ್ 15ರಂದು ರಾತ್ರಿವೇಳೆ ದುಷ್ಕರ್ಮಿಗಳು ಶಾಸಕರ ಮನೆ ಮುಂದೆಯೇ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಶಾಸಕರ ಮನೆ […]

ನಾಗಠಾಣ JDS ಶಾಸಕರಿಗೆ ಗುಂಡು ಹಾರಿಸಿ.. ಹತ್ಯೆ ಬೆದರಿಕೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 20, 2020 | 11:34 AM

ವಿಜಯಪುರ: ಜಿಲ್ಲೆಯ ನಾಗಠಾಣ ಕ್ಷೇತ್ರದ JDS ಶಾಸಕರಿಗೆ ಗುಂಡು ಹಾರಿಸಿ ಹತ್ಯೆ ಬೆದರಿಕೆ ಮಾಡಿರುವ ಘಟನೆ ವರದಿಯಾಗಿದೆ. ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್​ಗೆ ಜೀವಬೆದರಿಕೆ ಒಡ್ಡಲಾಗಿದೆ. ಜೊತೆಗೆ, ಕೆಲ ದುಷ್ಕರ್ಮಿಗಳು ನಡೆಸಿರುವ ಅಕ್ರಮಗಳನ್ನು ಪ್ರಶ್ನಿಸಿ ಅವರ ಕೃತ್ಯ ಬಹಿರಂಗಪಡಿಸಿದ್ದಕ್ಕೆ ಈ ರೀತಿ ಬೆದರಿಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದಾರೆ.

ಶಾಸಕರಿಗೆ ಇದೆಯಾ ಜೀವ‌ ಬೆದರಿಕೆ? ಕಳೆದ ನವೆಂಬರ್ 15ರಂದು ರಾತ್ರಿವೇಳೆ ದುಷ್ಕರ್ಮಿಗಳು ಶಾಸಕರ ಮನೆ ಮುಂದೆಯೇ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಶಾಸಕರ ಮನೆ ಆವರಣದಲ್ಲಿದ್ದ ಗಂಧದ ಮರ‌ವನ್ನು ಕಳುವು ಮಾಡಲು ಕೆಲ ಖದೀಮರು ಬಂದಿದ್ದರು. ಕಳ್ಳರು ಮರ ಕಡಿಯುವಾಗ ಎಚ್ಚರಗೊಂಡಿದ್ದ ಶಾಸಕ ಚೌಹಾಣ್ ಮತ್ತು ಅವರ ಕುಟುಂಬಸ್ಥರು ಖದೀಮರೊಂದಿಗೆ ವಾಗ್ವಾದಕ್ಕೆ ಇಳಿದರು. ಮರಗಳ್ಳರಿಗೆ ಶಾಸಕರು ಎಚ್ಚರ ಸಹ ನೀಡಿದ್ದರಂತೆ.

ಇದಕ್ಕೆ ಸಿಟ್ಟಿಗೆದ್ದ ಕಳ್ಳರು ಗುಂಡು ಹಾರಿಸಿ ಕೊಲ್ಲೋದಾಗಿ ಬೆದರಿಕೆ ಒಡ್ಡಿದ್ದರು ಎಂದು ಹೇಳಲಾಗಿದೆ. ಆದರೆ, ಶಾಸಕರು ಪೊಲೀಸರಿಗೆ ಕರೆ ಮಾಡುತ್ತಿದ್ದಂತೆ ಮರಗಳ್ಳರು ಕೂಡಲೇ ಅಲ್ಲಿಂದ ಕಾಲ್ಕಿತ್ತರಂತೆ. ಇದರಿಂದ ವಿಚಲಿತಗೊಂಡಿರುವ ಶಾಸಕ ದೇವಾನಂದ​ ಚೌಹಾಣ್​ ಈ ಕುರಿತು ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ. ಶಾಸಕರ ಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಸ್ಥಿತಿ ಹೇಗೆ ಎಂದು ಪ್ರಶ್ನಿಸುತ್ತೇನೆ ಎಂದು ಹೇಳಿದರು.

ಅಕ್ರಮ ಚಟುವಟಿಕೆ ಬಯಲಿಗೆಳೆದಿದ್ದಕ್ಕೆ ಬೆದರಿಕೆ? ಅಂದ ಹಾಗೆ, ಇದಕ್ಕೂ ಮುನ್ನ 15 ದಿನಗಳ ಹಿಂದೆ ಮಹಾದೇವ ಭೈರಗೊಂಡನ ಬೆಂಬಲಿಗರೂ ಸಹ ನಮ್ಮವರ ಬಳಿ ಮಾಹಿತಿ ಕೇಳಿದ್ದಾರೆ ಎಂದು ಶಾಸಕ ಚೌಹಾಣ್​ ಹೇಳಿದರು. ಶಾಸಕ ಎಷ್ಟು ದಿನ ಗನ್​ಮ್ಯಾನ್ ಇಟ್ಟುಕೊಂಡು ಓಡಾಡುತ್ತಾನೋ ಓಡಾಡಲಿ. ಆತನದ್ದು ಬಹಳ ಆಗಿದೆ ಎಂದು ಜೀವ ಬೆದರಿಕೆ ಹಾಕಿದ್ದಾರಂತೆ.

ನನ್ನ ಕ್ಷೇತ್ರದಲ್ಲಿ ಅಕ್ರಮ ಮರಳು ಮಾಫಿಯಾ, ಕಾನೂನು ಬಾಹೀರ ಚಟುವಟಿಕೆಗಳನ್ನು ತಡೆ ಹಾಕಿದ್ದೆ. ಗುಟ್ಕಾ, ಮಾವಾ ಮಾರಾಟಕ್ಕೆ ತಡೆ ಒಡ್ಡಿದೆ. ಹಾಗಾಗಿ, ನನಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ದೇವಾನಂದ​ ಚೌಹಾಣ್ ಹೇಳಿದ್ದಾರೆ.

ಶಾಸಕರ ಮನೆ ಆವರಣದಲ್ಲಿದ್ದ ಗಂಧದ ಮರಕ್ಕೇ ಕೊಡಲಿ ಹಾಕುವ ಯತ್ನ

ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ