ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು […]

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!
ಸಾಧು ಶ್ರೀನಾಥ್​

Updated on: Nov 10, 2019 | 9:40 PM

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ.

ಜಯನಗರ-ನಾಗಸಂದ್ರ ಮಾರ್ಗದ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಈ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ.

Published On - 9:39 pm, Sun, 10 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us