AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

ಸೋಶಿಯಲ್​ ಮೀಡಿಯಾದಲ್ಲಿ ನವ್ಯಾ ನಂದಾ ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ಈಗ ಅವರು ಉತ್ತರಾಖಂಡ್ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡಿದ್ದಾರೆ.

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!
ನವ್ಯಾ ನವೇಲಿ ನಂದಾ
ಮದನ್​ ಕುಮಾರ್​
|

Updated on: Mar 18, 2021 | 11:16 AM

Share

ಬಿಗ್​-ಬಿ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್​ ಪ್ಯಾಂಟ್​ ಕಾರಣಕ್ಕೆ!

ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್​ ಮೊಮ್ಮಗಳಿಗೂ, ಹರಿದ ಜೀನ್ಸ್​ ಪ್ಯಾಂಟ್​ಗೂ ಏನು ಸಂಬಂಧ? ಇಂಥ ಪ್ರಶ್ನೆ ಮೂಡುವುದು ಸಹಜ. ಇತ್ತೀಚೆಗೆ ಉತ್ತರಾಖಂಡ್ ಸಿಎಂ ತಿರತ್​ ಸಿಂಗ್​ ರಾವತ್​ ಅವರು ಮಹಿಳೆಯರ ಬಟ್ಟೆ ಕುರಿತಂತೆ ಒಂದು ಹೇಳಿಕೆ ನೀಡಿದ್ದರು. ‘ಯುವತಿಯರು ಶ್ರೀಮಂತರ ಮಕ್ಕಳಂತೆ ಕಾಣಲು ಹರಿದ ಜೀನ್ಸ್​ ಧರಿಸಿ ಮೊಣಗಾಲು ತೋರಿಸುವುದು ಭಾರತೀಯ ಸಂಸ್ಕೃತಿ ಅಲ್ಲ. ಪಾಶ್ಚಾತ್ಯರು ನಮ್ಮನ್ನು ಫಾಲೋ ಮಾಡುತ್ತಿರುವಾಗ ನಾವು ಹೀಗೆ ಪಾಶ್ಚಾತ್ಯರನ್ನು ಅನುಸರಿಸುತ್ತಿದ್ದೇನೆ. ಇದರಿಂದ ಫೋಷಕರು ಮಕ್ಕಳಿಗೆ ಕೆಟ್ಟ ಮಾದರಿಯನ್ನು ಹೇಳಿಕೊಡುತ್ತಿದ್ದಾರೆ’ ಎಂದು ತಿರತ್​ ಸಿಂಗ್​ ರಾವತ್​ ಹೇಳಿದ್ದಾರೆ.

ಉತ್ತರಾಖಂಡ್​ ಮುಖ್ಯಮಂತ್ರಿಯ ಈ ಹೇಳಿಕೆ ಎಲ್ಲೆಡೆ ವೈರಲ್​ ಆಗಿದೆ. ಮಹಿಳೆಯರಿಂದ ಇದಕ್ಕೆ ತೀವ್ರ ಟೀಕೆ ಕೇಳಿಬರುತ್ತಿದೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಟ್ಟೆಗೂ ಭಾರತೀಯ ಸಂಸ್ಕೃತಿಗೂ ಸಂಬಂಧ ಕಲ್ಪಿಸಿ ಮಾತನಾಡಿರುವುದನ್ನು ಖಂಡಿಸಲಾಗುತ್ತಿದೆ. ಅಮಿತಾಭ್​ ಬಚ್ಚನ್​ ಮೊಮ್ಮಗಳು ನವ್ಯಾ ನವೇಲಿ ನಂದಾ ಕೂಡ ತಿರತ್​ ಸಿಂಗ್​ ರಾವತ್​ ಮಾತುಗಳನ್ನು ಕಟುವಾಗಿ ವಿರೋಧಿಸಿದ್ದಾರೆ.

ಈ ಕುರಿತಂತೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ನವ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ವಿಶೇಷ ಏನೆಂದರೆ ತಾವು ಕೂಡ ಹರಿದ ಜೀನ್ಸ್​ ಧರಿಸಿರುವ ಫೋಟೋವನ್ನು ಅವರು ಪೋಸ್ಟ್ ಮಾಡಿಕೊಂಡಿದ್ದಾರೆ. ‘ನಮ್ಮ ಬಟ್ಟೆಯನ್ನು ಬದಲಿಸುವುದಕ್ಕಿಂತ ಮುಂಚೆ ನೀವು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ’ ಎಂದು ನವ್ಯಾ ಖಡಕ್​ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿಗಳು ಇಂಥ ಕಾಮೆಂಟ್​ ಮೂಲಕ ಸಮಾಜಕ್ಕೆ ಸಂದೇಶ ರವಾನಿಸುವುದು ನಿಜಕ್ಕೂ ಶಾಕಿಂಗ್​ ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!