AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಹುಭಾಷಾ ನಟಿ ನಯನತಾರಾ ಸದ್ಯ ಟಾಲಿವುಡ್‌, ಕಾಲಿವುನಲ್ಲಿ ಸಾಕಷ್ಟು ಅಭಿಮಾಗಳನ್ನ ಹೊಂದಿದ್ದಾರೆ. ಈಗ ಈ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅಭಿಮಾನಿಗಳಿಗೆ ಸಿಹಿ ಸುದ್ದಿ ನಿಡೋಕೆ ರೆಡಿಯಾಗಿದ್ದಾರಂತೆ.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ
ನಿರ್ದೇಶಕ ವಿಗ್ನೇಶ್ ಶಿವನ್ ಮತ್ತು ನಟಿ ನಯನತಾರಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 04, 2021 | 6:53 AM

Share

ಬಹುಭಾಷಾ ನಟಿ ನಯನತಾರ ಮುಟ್ಟಿದ್ದೆಲ್ಲಾ ಚಿನ್ನ ಅನ್ನೋ ಹಾಗೇ ಅಭಿನಯಿಸಿದ ಹಲವು ಸಿನಿಮಾಗಳು ಸೂಪರ್‌ ಹಿಟ್‌ ಆಗಿವೆ. ಸಾಲು ಸಾಲು ಸಿನಿಮಾಗಳಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರೋ ನಯನತಾರಾ ಲೇಡಿ ಸೂಪರ್ ಸ್ಟಾರ್ ಅಂತಾನೇ ಫೇಮಸ್. ಟಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ಹಲವು ಸಿನಿಮಾ ಇಂಡಸ್ಟ್ರಿಯಲ್ಲಿ ಮೋಡಿ ಮಾಡಿರೋ ಚೆಲುವೆ ಈಗ ವೈವಾಹಿ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ದಾರಂತೆ.

ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಯನತಾರಾ ಡೀಪ್ ಲವ್ ನಲ್ಲಿ ಬಿದ್ದಿದ್ದಾರೆ ಅನ್ನೋ ಸುದ್ದಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ನಯನತಾರಾ ಹಾಗು ವಿಗ್ನೇಶ್ ಕಳೆದ ವರ್ಷ ಚೆನ್ನೈನಲ್ಲಿ ಹೊಸ ಮನೆಯೊಂದನ್ನ ಖರೀದಿಸಿ ವೈವಾಹಿಕ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ರು. ಕಳೆದ ವರ್ಷ ಅದಕ್ಕೂ ಬ್ರೇಕ್ ಬಿದ್ದುತ್ತು. ಈಗ ಮುಂದಿನ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡೋಕೆ ಈ ಜೋಡಿ ರೆಡಿಯಾಗಿದೆ ಅನ್ನೋ ಮಾತು ಬಲವಾಗಿ ಕೇಳಿ ಬರ್ತಿದೆ.

ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಸದ್ಯದ ಮಾಹಿತಿ ಪ್ರಕಾರ ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಲಿದ್ದು ಅವರ ಕುಟುಂಬದವರು ಹಾಗು ಆಪ್ತರು ಮಾತ್ರವೇ ನಯನತಾರಾ ಹಾಗು ವಿಗ್ನೇಶ್ ಮದುವೆಯಲ್ಲಿ ಭಾಗವಹಿಸೋಕೆ ಅವಕಾಶ ನೀಡಲಾಗುತ್ತಂತೆ.

ಈ ನಡುವೆ ಎಲ್ಲೇ ಹೋದ್ರು ಜೊತೆ ಜೊತೆಯಾಗಿ ಸುತ್ತಾಡಿ ಮನಸಾರೆ ಮೆಚ್ಚಿಕೊಂಡಿರೋ ಜೋಡಿ ಮುಂದಿನ ತಿಂಗಳು ಮದುವೆ ಆಗೋಕೆ ರೆಡಿಯಾಗಿದೆಯಂತೆ. ಒಟ್ನಲ್ಲಿ ಆಗಾಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಾಗ್ತಿದ್ದ ಜೋಡಿ ಈಗಲಾದ್ರೂ ಈ ಮಾತನ್ನು ನಿಜ ಮಾಡಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

Published On - 6:53 am, Mon, 4 January 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!