AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಹುಭಾಷಾ ನಟಿ ನಯನತಾರಾ ಸದ್ಯ ಟಾಲಿವುಡ್‌, ಕಾಲಿವುನಲ್ಲಿ ಸಾಕಷ್ಟು ಅಭಿಮಾಗಳನ್ನ ಹೊಂದಿದ್ದಾರೆ. ಈಗ ಈ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅಭಿಮಾನಿಗಳಿಗೆ ಸಿಹಿ ಸುದ್ದಿ ನಿಡೋಕೆ ರೆಡಿಯಾಗಿದ್ದಾರಂತೆ.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ
ನಿರ್ದೇಶಕ ವಿಗ್ನೇಶ್ ಶಿವನ್ ಮತ್ತು ನಟಿ ನಯನತಾರಾ
ಆಯೇಷಾ ಬಾನು
|

Updated on:Jan 04, 2021 | 6:53 AM

Share

ಬಹುಭಾಷಾ ನಟಿ ನಯನತಾರ ಮುಟ್ಟಿದ್ದೆಲ್ಲಾ ಚಿನ್ನ ಅನ್ನೋ ಹಾಗೇ ಅಭಿನಯಿಸಿದ ಹಲವು ಸಿನಿಮಾಗಳು ಸೂಪರ್‌ ಹಿಟ್‌ ಆಗಿವೆ. ಸಾಲು ಸಾಲು ಸಿನಿಮಾಗಳಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರೋ ನಯನತಾರಾ ಲೇಡಿ ಸೂಪರ್ ಸ್ಟಾರ್ ಅಂತಾನೇ ಫೇಮಸ್. ಟಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ಹಲವು ಸಿನಿಮಾ ಇಂಡಸ್ಟ್ರಿಯಲ್ಲಿ ಮೋಡಿ ಮಾಡಿರೋ ಚೆಲುವೆ ಈಗ ವೈವಾಹಿ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ದಾರಂತೆ.

ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಯನತಾರಾ ಡೀಪ್ ಲವ್ ನಲ್ಲಿ ಬಿದ್ದಿದ್ದಾರೆ ಅನ್ನೋ ಸುದ್ದಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ನಯನತಾರಾ ಹಾಗು ವಿಗ್ನೇಶ್ ಕಳೆದ ವರ್ಷ ಚೆನ್ನೈನಲ್ಲಿ ಹೊಸ ಮನೆಯೊಂದನ್ನ ಖರೀದಿಸಿ ವೈವಾಹಿಕ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ರು. ಕಳೆದ ವರ್ಷ ಅದಕ್ಕೂ ಬ್ರೇಕ್ ಬಿದ್ದುತ್ತು. ಈಗ ಮುಂದಿನ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡೋಕೆ ಈ ಜೋಡಿ ರೆಡಿಯಾಗಿದೆ ಅನ್ನೋ ಮಾತು ಬಲವಾಗಿ ಕೇಳಿ ಬರ್ತಿದೆ.

ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಸದ್ಯದ ಮಾಹಿತಿ ಪ್ರಕಾರ ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಲಿದ್ದು ಅವರ ಕುಟುಂಬದವರು ಹಾಗು ಆಪ್ತರು ಮಾತ್ರವೇ ನಯನತಾರಾ ಹಾಗು ವಿಗ್ನೇಶ್ ಮದುವೆಯಲ್ಲಿ ಭಾಗವಹಿಸೋಕೆ ಅವಕಾಶ ನೀಡಲಾಗುತ್ತಂತೆ.

ಈ ನಡುವೆ ಎಲ್ಲೇ ಹೋದ್ರು ಜೊತೆ ಜೊತೆಯಾಗಿ ಸುತ್ತಾಡಿ ಮನಸಾರೆ ಮೆಚ್ಚಿಕೊಂಡಿರೋ ಜೋಡಿ ಮುಂದಿನ ತಿಂಗಳು ಮದುವೆ ಆಗೋಕೆ ರೆಡಿಯಾಗಿದೆಯಂತೆ. ಒಟ್ನಲ್ಲಿ ಆಗಾಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಾಗ್ತಿದ್ದ ಜೋಡಿ ಈಗಲಾದ್ರೂ ಈ ಮಾತನ್ನು ನಿಜ ಮಾಡಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

Published On - 6:53 am, Mon, 4 January 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು