AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಹುಭಾಷಾ ನಟಿ ನಯನತಾರಾ ಸದ್ಯ ಟಾಲಿವುಡ್‌, ಕಾಲಿವುನಲ್ಲಿ ಸಾಕಷ್ಟು ಅಭಿಮಾಗಳನ್ನ ಹೊಂದಿದ್ದಾರೆ. ಈಗ ಈ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅಭಿಮಾನಿಗಳಿಗೆ ಸಿಹಿ ಸುದ್ದಿ ನಿಡೋಕೆ ರೆಡಿಯಾಗಿದ್ದಾರಂತೆ.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ
ನಿರ್ದೇಶಕ ವಿಗ್ನೇಶ್ ಶಿವನ್ ಮತ್ತು ನಟಿ ನಯನತಾರಾ
ಆಯೇಷಾ ಬಾನು
|

Updated on:Jan 04, 2021 | 6:53 AM

Share

ಬಹುಭಾಷಾ ನಟಿ ನಯನತಾರ ಮುಟ್ಟಿದ್ದೆಲ್ಲಾ ಚಿನ್ನ ಅನ್ನೋ ಹಾಗೇ ಅಭಿನಯಿಸಿದ ಹಲವು ಸಿನಿಮಾಗಳು ಸೂಪರ್‌ ಹಿಟ್‌ ಆಗಿವೆ. ಸಾಲು ಸಾಲು ಸಿನಿಮಾಗಳಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರೋ ನಯನತಾರಾ ಲೇಡಿ ಸೂಪರ್ ಸ್ಟಾರ್ ಅಂತಾನೇ ಫೇಮಸ್. ಟಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ಹಲವು ಸಿನಿಮಾ ಇಂಡಸ್ಟ್ರಿಯಲ್ಲಿ ಮೋಡಿ ಮಾಡಿರೋ ಚೆಲುವೆ ಈಗ ವೈವಾಹಿ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ದಾರಂತೆ.

ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಯನತಾರಾ ಡೀಪ್ ಲವ್ ನಲ್ಲಿ ಬಿದ್ದಿದ್ದಾರೆ ಅನ್ನೋ ಸುದ್ದಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ನಯನತಾರಾ ಹಾಗು ವಿಗ್ನೇಶ್ ಕಳೆದ ವರ್ಷ ಚೆನ್ನೈನಲ್ಲಿ ಹೊಸ ಮನೆಯೊಂದನ್ನ ಖರೀದಿಸಿ ವೈವಾಹಿಕ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ರು. ಕಳೆದ ವರ್ಷ ಅದಕ್ಕೂ ಬ್ರೇಕ್ ಬಿದ್ದುತ್ತು. ಈಗ ಮುಂದಿನ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡೋಕೆ ಈ ಜೋಡಿ ರೆಡಿಯಾಗಿದೆ ಅನ್ನೋ ಮಾತು ಬಲವಾಗಿ ಕೇಳಿ ಬರ್ತಿದೆ.

ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಸದ್ಯದ ಮಾಹಿತಿ ಪ್ರಕಾರ ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಲಿದ್ದು ಅವರ ಕುಟುಂಬದವರು ಹಾಗು ಆಪ್ತರು ಮಾತ್ರವೇ ನಯನತಾರಾ ಹಾಗು ವಿಗ್ನೇಶ್ ಮದುವೆಯಲ್ಲಿ ಭಾಗವಹಿಸೋಕೆ ಅವಕಾಶ ನೀಡಲಾಗುತ್ತಂತೆ.

ಈ ನಡುವೆ ಎಲ್ಲೇ ಹೋದ್ರು ಜೊತೆ ಜೊತೆಯಾಗಿ ಸುತ್ತಾಡಿ ಮನಸಾರೆ ಮೆಚ್ಚಿಕೊಂಡಿರೋ ಜೋಡಿ ಮುಂದಿನ ತಿಂಗಳು ಮದುವೆ ಆಗೋಕೆ ರೆಡಿಯಾಗಿದೆಯಂತೆ. ಒಟ್ನಲ್ಲಿ ಆಗಾಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಾಗ್ತಿದ್ದ ಜೋಡಿ ಈಗಲಾದ್ರೂ ಈ ಮಾತನ್ನು ನಿಜ ಮಾಡಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

Published On - 6:53 am, Mon, 4 January 21

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್