AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ. ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ. ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ […]

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್
ಆಯೇಷಾ ಬಾನು
|

Updated on: Nov 22, 2020 | 7:53 AM

Share

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ.

ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆಯಲ್ಲಿ ಎನ್​ಸಿಬಿ ಅಧಿಕಾರಿಗಳು ಗಾಂಜಾ ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಮುಂಬೈನ ಅಂಧೇರಿಯಲ್ಲಿರುವ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ರೇಡ್ ಆಗಿತ್ತು. ಈ ಸಂದರ್ಭದಲ್ಲಿ ಎನ್​ಸಿಬಿ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಏಕೆಂದರೆ ಅಲ್ಲಿ 86.5 ಗ್ರಾಂ ಗಾಂಜಾ ಸಿಕ್ಕಿತ್ತು. ಹೀಗಾಗಿ ಭಾರತಿ ಸಿಂಗ್ ವಿಚಾರಣೆ ನಡೆಸಲಾಗುತ್ತಿದೆ.

ಒಟ್ನಲ್ಲಿ ದಿನದಿಂದ ದಿನಕ್ಕೆ ಸುಶಾಂತ್ ಪ್ರಕರಣ ದೊಡ್ಡ ತಿರುವು ಪಡೆಯುತ್ತಿದೆ. ಸುಶಾಂತ್ ಪ್ರಕರಣದ ಜೊತೆ ಹಲವರ ಬಣ್ಣ ಕೂಡ ಬಯಲಾಗುತ್ತಿದೆ. ಈಗಾಗಲೇ ಬಾಲಿವುಡ್ ಸ್ಟಾರ್​ಗಳನ್ನ ಎನ್​ಸಿಬಿ ಹೆಡೆಮುರಿ ಕಟ್ಟಿದೆ. ಇದರ ಜೊತೆ ಜೊತೆಗೆ ಇನ್ನೂ ಹಲವರು ಖೆಡ್ಡಾಗಿ ಬೀಳುವ ಮುನ್ಸೂಚನೆ ಸಿಕ್ಕಿದೆ. ಇಷ್ಟೆಲ್ಲದರ ಮಧ್ಯೆ ಕಾಮಿಡಿಯನ್ ಕೂಡ ಗಾಂಜಾ ಇಟ್ಟಕೊಂಡು ಲಾಕ್ ಆಗಿರೋದು ಭಾರಿ ಸಂಚಲನ ಸೃಷ್ಟಿಸಿದೆ.

ಇದನ್ನೂ ಓದಿ: ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ