AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವರ್ ಚಂಡಮಾರುತ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಎನ್​ಡಿಆರ್​ಎಫ್

ನಿವರ್ ಭೀಕರ ಚಂಡಮಾರುತವಾಗಿ ರೂಪತಳೆಯುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಸಿದ್ದು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) 19 ಟೀಮುಗಳು ತಮಿಳುನಾಡಿನಲ್ಲಿ, 6 ಪುದುಚೆರಿಯಲ್ಲಿ, ಮತ್ತು 7 ಆಂಧ್ರ ಪ್ರದೇಶದಲ್ಲಿ ಪರಿಸ್ಥಿಯನ್ನು ಎದುರಿಸಲು ಸನ್ನದ್ಧವಾಗಿವೆಯೆಂದು ಎನ್​ಡಿಆರ್​ಎಫ್ ಪ್ರಧಾನ ನಿರ್ದೇಶಕ ಎಸ್ ಎನ್ ಪ್ರಧಾನ್ ತಿಳಿಸಿದ್ದಾರೆ.

ನಿವರ್ ಚಂಡಮಾರುತ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಎನ್​ಡಿಆರ್​ಎಫ್
ತಮಿಳುನಾಡು ಕಡಲ ತೀರದಲ್ಲಿ ಪ್ರಬಲಗೊಳ್ಳುತ್ತಿದೆ ನಿವಾರ್ ಚಂಡಮಾರುತ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 25, 2020 | 10:19 PM

Share

ಪ್ರಚಂಡ ತೀವ್ರತೆಯ ನಿವರ್ ಚಂಡಮಾರುತವು ತಮಿಳುನಾಡು ರಾಜ್ಯದ ಕುಡಲೂರ್​ನಿಂದ ಸುಮಾರು 85 ಕಿಮೀ ದೂರದ ಪೂರ್ವ ಮತ್ತು ಆಗ್ನೇಯ ಭಾಗ ಹಾಗೂ ಪುದುಚೆರಿಯ ಪೂರ್ವ ಹಾಗೂ ಆಗ್ನೇಯ ಭಾಗದಲ್ಲಿ ಸ್ಥಿತಗೊಂಡಿದ್ದು ತಮಿಳನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶಗಳಾಗಿರುವ ಕರೈಕಲ್ ಮತ್ತು ಮಮ್ಮಲಪುರಂ ತೀರವನ್ನು ನವೆಂಬರ್ 25ರ ಮಧ್ಯರಾತ್ರಿ ಅಪ್ಪಳಿಸಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕೋಸ್ಟ್ ಗಾರ್ಡ್​ನ ಒಂದು ಹಡಗು ಅಗತ್ಯ ಸಾಮಗ್ರಿಗಳೊಂದಿಗೆ ಚೆನೈ ಬಂದರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಆಗ್ನೇಯ ಭಾಗದಲ್ಲಿರುವ ರಾಜ್ಯಗಳು ನಿವರ್ ಚಂಡಮಾರುತವನ್ನು ಎದುರಿಸಿಲು ಸಕಲ ತಯಾರಿಗಳನ್ನು ಮಾಡಿಕೊಂಡಿವೆಯೆಂದು ಆಯಾ ಸರ್ಕಾರಗಳು ತಿಳಿಸಿವೆ.

ನಿವರ್ ಭೀಕರ ಚಂಡಮಾರುತವಾಗಿ ರೂಪತಳೆಯುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) 19 ಟೀಮುಗಳು ತಮಿಳುನಾಡಿನಲ್ಲಿ, 6 ಪುದುಚೆರಿಯಲ್ಲಿ, ಮತ್ತು 7 ಆಂಧ್ರ ಪ್ರದೇಶದಲ್ಲಿ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆಯೆಂದು ಎನ್​ಡಿಆರ್​ಎಫ್ ಪ್ರಧಾನ ನಿರ್ದೇಶಕ ಎಸ್ ಎನ್ ಪ್ರಧಾನ ಇಂದು ಮತ್ತೊಮ್ಮೆ ಹೇಳಿದರು.

ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಾಗುವುದನ್ನು ತಟೆಗಟ್ಟಲು ಕೇಂದ್ರ ಸರ್ಕಾರದ ಸಂಸ್ಥೆಗಳು ರಾಜ್ಯ ಸರ್ಕಾರಗಳ ಸಮನ್ವಯದೊಂದಿಗೆ ಕೆಲಸ ಮಾಡುತ್ತಿವೆಯೆಂದು ಸಹ ಪ್ರಧಾನ್ ಹೇಳಿದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!