‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ. ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ […]

‘ಕೋವಿಡ್ ಆಸ್ಪತ್ರೆಗಳಲ್ಲಿ ಲೋಪ: ಮುಂದುವರಿದ್ರೆ ಕೆಎಎಸ್ ಅಧಿಕಾರಿಗಳ ನಿಗಾ ಹಾಕ್ತೇನೆ’
ಡಾ. ಕೆ ಸುಧಾಕರ್​
ಸಾಧು ಶ್ರೀನಾಥ್​

Updated on: Jun 23, 2020 | 6:54 PM

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಚಿಕಿತ್ಸೆ ವ್ಯವಸ್ಥೆಗಳಲ್ಲಿ ಲೋಪಗಳು ನುಸುಳಿವೆ ಎಂದು ಖುದ್ದು ಸರ್ಕಾರಿ ಆಸ್ಪತ್ರೆಗಳಲ್ಲಿನ ಸೋಂಕಿತರು ಅಲವತ್ತುಕೊಳ್ಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಸ್ವತಃ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ.

ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದರೆ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ನಿರ್ದೇಶಕರಿಗೆ ಎಚ್ಚರಿಕೆ ನೀಡಿದ್ರು.

ಇನ್ನೂ ದೂರು ಬಂದಲ್ಲಿ ಕೆಎಎಸ್ ಅಧಿಕಾರಿಗಳ ನಿಗಾ ಹಾಕಬೇಕಾಗುತ್ತದೆ, ಎಚ್ರಾ!
ಇನ್ನೂ ದೂರು ಬಂದಲ್ಲಿ ಸಂಸ್ಥೆಗಳ ಆಡಳಿತ ನೋಡಿಕೊಳ್ಳಲು ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದೂ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಲು ಸಹ ಇದೇ ವೇಳೆ ಸೂಚನೆ ಹೊರಬಿತ್ತು. ತಜ್ಞರು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೋಗುತ್ತಿಲ್ಲ ಎಂಬ ದೂರು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಡಾ. ಕೆ. ಸುಧಾಕರ್ ಅವರು ಹೋಮ್ ಕ್ವಾರಂಟೈನ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಖಾಸಗಿ ನಿವಾಸದಿಂದ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.

Published On - 6:53 pm, Tue, 23 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us