AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..
ನೇಹಾ ಕಕ್ಕರ್ ಮತ್ತು ಪತಿ ರೋಹನ್ ಪ್ರೀತ್ ಸಿಂಗ್
ಆಯೇಷಾ ಬಾನು
|

Updated on:Dec 18, 2020 | 11:59 AM

Share

ತನ್ನ ಸುಮಧುರ ಗಾಯನದ ಮೂಲಕ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನೇಹಾ ಕಕ್ಕರ್ ಮದುವೆಯಾದ ಎರಡೇ ತಿಂಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡ ಆ ಒಂದು ಪಿಕ್ ಈಗ ನೇಹಾ ಅಭಿಮಾನಿ ಬಳಗಕ್ಕೆ ಅಚ್ಚರಿ ಮೂಡಿಸಿದೆ.

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಇನ್​ಸ್ಟಾಗ್ರಾಂನಲ್ಲಿ #KhyaalRakhyaKar (ಕಾಳಜಿ ವಹಿಸು) ಎಂದು ಬರೆದು ಪತಿ ಜೊತೆಗೆ ಬೇಬಿ ಬಂಪ್ ತೋರಿಸುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಗರ್ಭಿಣಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ. ಇದಕ್ಕೆ ಉತ್ತರವಾಗಿ ಪತಿ ರೋಹನ್ ಪ್ರೀತ್ ಸಿಂಗ್​ “Ab Toh Kuch Zyada Hi Khyaal Rakhna Parhega Nehuuuu, (ಇನ್ನು ಮುಂದೆ ಹೆಚ್ಚಿನ ಕಾಳಜಿಯೇ ವಹಿಸಬೇಕಾಗುತ್ತೆ ನೇಹೂ) ಎಂದು ಕಾಮೆಂಟ್ ಸೆಕ್ಷೆನ್​ನಲ್ಲಿ ಬರೆದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ, ಹಿತೈಷಿಗಳಿಂದ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್ ಇದೇ ವರ್ಷದ ಅಕ್ಟೋಬರ್​ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಈ ಜೋಡಿ ಹನಿಮೂನ್​ಗೆ ದುಬೈಗೆ ಹಾರಿದ್ದರು.

Published On - 11:57 am, Fri, 18 December 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ