AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..
ನೇಹಾ ಕಕ್ಕರ್ ಮತ್ತು ಪತಿ ರೋಹನ್ ಪ್ರೀತ್ ಸಿಂಗ್
ಆಯೇಷಾ ಬಾನು
|

Updated on:Dec 18, 2020 | 11:59 AM

Share

ತನ್ನ ಸುಮಧುರ ಗಾಯನದ ಮೂಲಕ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನೇಹಾ ಕಕ್ಕರ್ ಮದುವೆಯಾದ ಎರಡೇ ತಿಂಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡ ಆ ಒಂದು ಪಿಕ್ ಈಗ ನೇಹಾ ಅಭಿಮಾನಿ ಬಳಗಕ್ಕೆ ಅಚ್ಚರಿ ಮೂಡಿಸಿದೆ.

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಇನ್​ಸ್ಟಾಗ್ರಾಂನಲ್ಲಿ #KhyaalRakhyaKar (ಕಾಳಜಿ ವಹಿಸು) ಎಂದು ಬರೆದು ಪತಿ ಜೊತೆಗೆ ಬೇಬಿ ಬಂಪ್ ತೋರಿಸುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಗರ್ಭಿಣಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ. ಇದಕ್ಕೆ ಉತ್ತರವಾಗಿ ಪತಿ ರೋಹನ್ ಪ್ರೀತ್ ಸಿಂಗ್​ “Ab Toh Kuch Zyada Hi Khyaal Rakhna Parhega Nehuuuu, (ಇನ್ನು ಮುಂದೆ ಹೆಚ್ಚಿನ ಕಾಳಜಿಯೇ ವಹಿಸಬೇಕಾಗುತ್ತೆ ನೇಹೂ) ಎಂದು ಕಾಮೆಂಟ್ ಸೆಕ್ಷೆನ್​ನಲ್ಲಿ ಬರೆದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ, ಹಿತೈಷಿಗಳಿಂದ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್ ಇದೇ ವರ್ಷದ ಅಕ್ಟೋಬರ್​ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಈ ಜೋಡಿ ಹನಿಮೂನ್​ಗೆ ದುಬೈಗೆ ಹಾರಿದ್ದರು.

Published On - 11:57 am, Fri, 18 December 20

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು