AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 […]

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ
ಆಯೇಷಾ ಬಾನು
|

Updated on: Sep 01, 2020 | 9:00 AM

Share

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ.

ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 ಸಾವಿರ ಶುಲ್ಕ ಪಾವತಿಸಬೇಕು. 1ರಿಂದ 5ನೇ ತರಗತಿ ಮಕ್ಕಳಿಗೆ 53,800 ರೂಪಾಯಿ ಶುಲ್ಕ. 6ರಿಂದ 10ನೇ ತರಗತಿ ಮಕ್ಕಳಿಗೆ 55,400 ರೂಪಾಯಿ ಶುಲ್ಕ ಹಾಗೂ ವಿಜ್ಞಾನ ವಿಭಾಗದ PUC ವಿದ್ಯಾರ್ಥಿಗಳಿಗೆ ₹60 ಸಾವಿರ ಶುಲ್ಕ.

ವಾಣಿಜ್ಯ ವಿಭಾಗದ PUC ವಿದ್ಯಾರ್ಥಿಗಳಿಗೆ ₹55 ಸಾವಿರ ಶುಲ್ಕ. ಟ್ಯೂಷನ್ ಫೀಸ್, ಪುಸ್ತಕ, ನೋಟ್ ಬುಕ್, ಕಂಪ್ಯೂಟರ್ ಲ್ಯಾಬ್, ಪರೀಕ್ಷಾ ಶುಲ್ಕ, ಲೈಬ್ರರಿ ಆ್ಯಕ್ಟಿವಿಟಿ ಫೀಸ್, ವ್ಯಾಲ್ಯೂ ಪ್ಲಸ್ ಕ್ಲಾಸ್, ನ್ಯೂ ಹೊರೈಝನ್ ಟೈಮ್ಸ್, ಡಿಜಿಟಲ್ ಬೋರ್ಡ್ ಶುಲ್ಕ, ಲ್ಯಾಬೋರೇಟರಿ ವೆಚ್ಚ, ಕೋ-ಕರಿಕ್ಯುಲರ್ ಆ್ಯಕ್ಟಿವಿಟಿ ಪಿಕ್‌ನಿಕ್, ಮೆಡಿಕಲ್ ಚೆಕ್‌ಅಪ್, ಯೋಗ, ವಾರ್ಷಿಕೋತ್ಸವ, ಕ್ರೀಡಾ ಚಟುವಟಿಕೆ ಸೇರಿದಂತೆ ಹಲವು ಫೀಸ್ ಸೇರಿಸಿ ಶಾಲಾ ಆಡಳಿತ ಮಂಡಳಿ ಹೆಚ್ಚುವರಿ ಶುಲ್ಕ ವಿಧಿಸಿದೆ. ಹೀಗಾಗಿ ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಿಸಿದರೆ ನಾವು ಎಲ್ಲಿಗೆ ಹೋಗುವುದು ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಿಎಂ ಕೇರ್‌ಗೆ 5 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ಹೀಗಾಗಿ ಶಿಕ್ಷಕರಿಗೆ ವೇತನವನ್ನು ನೀಡುವುದಕ್ಕೆ ಕಷ್ಟವಾಗಿದೆ. ಅದಕ್ಕಾಗಿ ಸ್ವಲ್ಪ ಶುಲ್ಕವನ್ನು ಹೆಚ್ಚಳ ಮಾಡಿರುವುದಾಗಿ ಶಾಲೆ ಮಾಹಿತಿ ನೀಡಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು