AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 […]

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 01, 2020 | 9:00 AM

Share

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ.

ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 ಸಾವಿರ ಶುಲ್ಕ ಪಾವತಿಸಬೇಕು. 1ರಿಂದ 5ನೇ ತರಗತಿ ಮಕ್ಕಳಿಗೆ 53,800 ರೂಪಾಯಿ ಶುಲ್ಕ. 6ರಿಂದ 10ನೇ ತರಗತಿ ಮಕ್ಕಳಿಗೆ 55,400 ರೂಪಾಯಿ ಶುಲ್ಕ ಹಾಗೂ ವಿಜ್ಞಾನ ವಿಭಾಗದ PUC ವಿದ್ಯಾರ್ಥಿಗಳಿಗೆ ₹60 ಸಾವಿರ ಶುಲ್ಕ.

ವಾಣಿಜ್ಯ ವಿಭಾಗದ PUC ವಿದ್ಯಾರ್ಥಿಗಳಿಗೆ ₹55 ಸಾವಿರ ಶುಲ್ಕ. ಟ್ಯೂಷನ್ ಫೀಸ್, ಪುಸ್ತಕ, ನೋಟ್ ಬುಕ್, ಕಂಪ್ಯೂಟರ್ ಲ್ಯಾಬ್, ಪರೀಕ್ಷಾ ಶುಲ್ಕ, ಲೈಬ್ರರಿ ಆ್ಯಕ್ಟಿವಿಟಿ ಫೀಸ್, ವ್ಯಾಲ್ಯೂ ಪ್ಲಸ್ ಕ್ಲಾಸ್, ನ್ಯೂ ಹೊರೈಝನ್ ಟೈಮ್ಸ್, ಡಿಜಿಟಲ್ ಬೋರ್ಡ್ ಶುಲ್ಕ, ಲ್ಯಾಬೋರೇಟರಿ ವೆಚ್ಚ, ಕೋ-ಕರಿಕ್ಯುಲರ್ ಆ್ಯಕ್ಟಿವಿಟಿ ಪಿಕ್‌ನಿಕ್, ಮೆಡಿಕಲ್ ಚೆಕ್‌ಅಪ್, ಯೋಗ, ವಾರ್ಷಿಕೋತ್ಸವ, ಕ್ರೀಡಾ ಚಟುವಟಿಕೆ ಸೇರಿದಂತೆ ಹಲವು ಫೀಸ್ ಸೇರಿಸಿ ಶಾಲಾ ಆಡಳಿತ ಮಂಡಳಿ ಹೆಚ್ಚುವರಿ ಶುಲ್ಕ ವಿಧಿಸಿದೆ. ಹೀಗಾಗಿ ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಿಸಿದರೆ ನಾವು ಎಲ್ಲಿಗೆ ಹೋಗುವುದು ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಿಎಂ ಕೇರ್‌ಗೆ 5 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ಹೀಗಾಗಿ ಶಿಕ್ಷಕರಿಗೆ ವೇತನವನ್ನು ನೀಡುವುದಕ್ಕೆ ಕಷ್ಟವಾಗಿದೆ. ಅದಕ್ಕಾಗಿ ಸ್ವಲ್ಪ ಶುಲ್ಕವನ್ನು ಹೆಚ್ಚಳ ಮಾಡಿರುವುದಾಗಿ ಶಾಲೆ ಮಾಹಿತಿ ನೀಡಿದೆ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ