AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 […]

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 01, 2020 | 9:00 AM

Share

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶಾಲೆಗಳು ಇನ್ನೂ ಆರಂಭವಾಗಿಲ್ಲಾ, ಆದ್ರೆ ಲಕ್ಷ ಲಕ್ಷ ಫೀಸ್ ಮಾತ್ರ ಕಟ್ಟಲೇಬೇಕಂತೆ. ಶಾಲೆಯ ಫೀಸ್ ಹೆಚ್ಚಳ ಮಾಡುವಂತಿಲ್ಲಾ ಎಂದು ಸರ್ಕಾರವೇ ಆದೇಶ ನೀಡಿದೆ. ಆದ್ರೆ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ.

ನ್ಯೂ ಹೊರೈಝನ್ ಗುರುಕುಲ ಶಾಲೆ ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಿಸಿದೆ. ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿರುವ ಈ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡಿದೆ. 2ನೇ ಹಂತದ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯ ಮಾಡಲಾಗುತ್ತಿದೆ. ಯುಕೆಜಿ ವಿದ್ಯಾರ್ಥಿಗಳು ₹83 ಸಾವಿರ ಶುಲ್ಕ ಪಾವತಿಸಬೇಕು. 1ರಿಂದ 5ನೇ ತರಗತಿ ಮಕ್ಕಳಿಗೆ 53,800 ರೂಪಾಯಿ ಶುಲ್ಕ. 6ರಿಂದ 10ನೇ ತರಗತಿ ಮಕ್ಕಳಿಗೆ 55,400 ರೂಪಾಯಿ ಶುಲ್ಕ ಹಾಗೂ ವಿಜ್ಞಾನ ವಿಭಾಗದ PUC ವಿದ್ಯಾರ್ಥಿಗಳಿಗೆ ₹60 ಸಾವಿರ ಶುಲ್ಕ.

ವಾಣಿಜ್ಯ ವಿಭಾಗದ PUC ವಿದ್ಯಾರ್ಥಿಗಳಿಗೆ ₹55 ಸಾವಿರ ಶುಲ್ಕ. ಟ್ಯೂಷನ್ ಫೀಸ್, ಪುಸ್ತಕ, ನೋಟ್ ಬುಕ್, ಕಂಪ್ಯೂಟರ್ ಲ್ಯಾಬ್, ಪರೀಕ್ಷಾ ಶುಲ್ಕ, ಲೈಬ್ರರಿ ಆ್ಯಕ್ಟಿವಿಟಿ ಫೀಸ್, ವ್ಯಾಲ್ಯೂ ಪ್ಲಸ್ ಕ್ಲಾಸ್, ನ್ಯೂ ಹೊರೈಝನ್ ಟೈಮ್ಸ್, ಡಿಜಿಟಲ್ ಬೋರ್ಡ್ ಶುಲ್ಕ, ಲ್ಯಾಬೋರೇಟರಿ ವೆಚ್ಚ, ಕೋ-ಕರಿಕ್ಯುಲರ್ ಆ್ಯಕ್ಟಿವಿಟಿ ಪಿಕ್‌ನಿಕ್, ಮೆಡಿಕಲ್ ಚೆಕ್‌ಅಪ್, ಯೋಗ, ವಾರ್ಷಿಕೋತ್ಸವ, ಕ್ರೀಡಾ ಚಟುವಟಿಕೆ ಸೇರಿದಂತೆ ಹಲವು ಫೀಸ್ ಸೇರಿಸಿ ಶಾಲಾ ಆಡಳಿತ ಮಂಡಳಿ ಹೆಚ್ಚುವರಿ ಶುಲ್ಕ ವಿಧಿಸಿದೆ. ಹೀಗಾಗಿ ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಿಸಿದರೆ ನಾವು ಎಲ್ಲಿಗೆ ಹೋಗುವುದು ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಿಎಂ ಕೇರ್‌ಗೆ 5 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ಹೀಗಾಗಿ ಶಿಕ್ಷಕರಿಗೆ ವೇತನವನ್ನು ನೀಡುವುದಕ್ಕೆ ಕಷ್ಟವಾಗಿದೆ. ಅದಕ್ಕಾಗಿ ಸ್ವಲ್ಪ ಶುಲ್ಕವನ್ನು ಹೆಚ್ಚಳ ಮಾಡಿರುವುದಾಗಿ ಶಾಲೆ ಮಾಹಿತಿ ನೀಡಿದೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ