AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು: NIAಯಿಂದ ಉಗ್ರರ ಖತರ್​ನಾಕ್ ಪ್ಲ್ಯಾನ್‌ ಬಯಲು

ಬೆಂಗಳೂರು: ಸಿಲಿಕಾನ್​ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ. ಇಷ್ಟಕ್ಕೂ NIA ಬಂಧಿತ ಈ ಇಬ್ಬರು ಶಂಕಿತರು ಯಾರು? ಇವರ ಖತರ್​ನಾಕ್​ ಕೆಲಸ ಎಂಥದ್ದು ಅನ್ನೋದರ ಡಿಟೇಲ್ಸ್ ಇಲ್ಲಿದೆ ನೋಡಿ. ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು! ಹೌದು, ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್​ನಾಕ್ […]

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು: NIAಯಿಂದ ಉಗ್ರರ ಖತರ್​ನಾಕ್ ಪ್ಲ್ಯಾನ್‌ ಬಯಲು
ಪ್ರಾತಿನಿಧಿಕ ಚಿತ್ರ
KUSHAL V
|

Updated on:Oct 09, 2020 | 7:33 AM

Share

ಬೆಂಗಳೂರು: ಸಿಲಿಕಾನ್​ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ. ಇಷ್ಟಕ್ಕೂ NIA ಬಂಧಿತ ಈ ಇಬ್ಬರು ಶಂಕಿತರು ಯಾರು? ಇವರ ಖತರ್​ನಾಕ್​ ಕೆಲಸ ಎಂಥದ್ದು ಅನ್ನೋದರ ಡಿಟೇಲ್ಸ್ ಇಲ್ಲಿದೆ ನೋಡಿ. ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು! ಹೌದು, ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್​ನಾಕ್ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದರು. ಆದ್ರೆ ರಾಷ್ಟ್ರೀಯ ತನಿಖಾ ದಳ ಶಂಕಿತ ಉಗ್ರರ ಹೆಡೆಮುರಿ ಕಟ್ಟಿದೆ.

ಅಕ್ಕಿ ವ್ಯಾಪಾರಿ, ಟೆಕ್ಕಿಯಿಂದ ಜಿಹಾದಿ ಉಗ್ರರ ಸಂಘಟನೆ ಕೆಲ ತಿಂಗಳ ಹಿಂದೆ ನಗರದ ಬಸವನಗುಡಿಯ ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಉಗ್ರ ವೈದ್ಯ ಅಬ್ದುಲ್ ರೆಹಮಾನ್‌ನನ್ನು NIA ಬಂಧಿಸಿತ್ತು. ಈತನಿಗೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಡೆತ್ತಿದ್ದಾರೆ. ಆಗ ನಗರದಲ್ಲಿ ಅಡಗಿರುವ ಈ ಇಬ್ಬರ ಬಗ್ಗೆ ಬಾಯ್ಬಿಟ್ಟಿದ್ದ. ಕೂಡಲೇ, ಕಾರ್ಯಾಚರಣೆ ನಡೆಸಿದ NIA, ತಮಿಳುನಾಡು ಮೂಲದ ಆಹ್ಮದ್ ಅಬ್ದುಲ್ ಖಾದರ್ ಹಾಗೂ ಫ್ರೇಜರ್ ಟೌನ್‌ನ ಇರ್ಫಾನ್ ನಾಸೀರ್‌ನನ್ನ ಬಂಧಿಸಿದೆ. ಇವರಿಬ್ಬರ ಹಿಸ್ಟರಿ ಹೀಗಿದೆ.

ಇರ್ಫಾನ್ ಮೂಲತಃ ಅಕ್ಕಿ ವ್ಯಾಪಾರಿಯಾಗಿದ್ರೆ, ಅಹ್ಮದ್ ಅಬ್ದುಲ್ ಖಾದರ್ ಟೆಕ್ಕಿ. ಇಬ್ಬರು ಹಿಜ್ಬುತ್ ಉತ್ ತೆಹ್ರೀರ್ ಸಂಘಟನೆ ಸದಸ್ಯರು. ಬೆಂಗಳೂರಿನಲ್ಲಿ ಐಸಿಸ್‌ಗೆ ಉಗ್ರರರನ್ನ ಸಂಘಟಿಸುವ ಕೆಲಸ ಮಾಡಿಕೊಂಡು ನಗರದಲ್ಲಿ ಬೀಡುಬಿಟ್ಟಿದ್ದರು. ಅಂದ ಹಾಗೆ, ಬೆಂಗಳೂರಿನಲ್ಲಿ ಖುರಾನ್ ಸರ್ಕಲ್ ಎಂಬ ಸಂಘಟನೆ ಸ್ಥಾಪನೆ ಮಾಡಿಕೊಂಡು, ಐಸಿಸ್‌ಗೆ ಯುವಕರನ್ನ ಕಳುಹಿಸಲು ಸಂಘಟನೆ ಮಾಡ್ತಿದ್ದರು. ಈ ಹಿಂದೆ ಬಂಧನವಾಗಿದ್ದ ಅಬ್ದುಲ್ ರೆಹಮಾನ್‌ ಎಂಬಾತನನ್ನು ಇವರಿಬ್ಬರೇ ಸಿರಿಯಾಗೆ ಕಳುಹಿಸಿದ್ದು, ಅಷ್ಟೇ ಅಲ್ಲ ಇರ್ಫಾನ್ ಮತ್ತು ಅಹ್ಮದ್ ಇನ್ನಿಬ್ಬರನ್ನು ಸಹ ಸಿರಿಯಾಗೆ ಕಳುಹಿಸಿದ್ದರು. ಆದ್ರೆ ಆ ಇಬ್ಬರು ಸಿರಿಯಾದಲ್ಲೇ ಮೃತಪಟ್ಟಿರುವ ಬಗ್ಗೆ ಸ್ಫೋಟಕ ಮಾಹಿತಿ ಇದೀಗ ತನಿಖೆಯಿಂದ ಬಯಲಾಗಿದೆ. ಈ ಎಲ್ಲಾ ವಿಷಯಗಳು ಗೊತ್ತಾಗುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಗುರಪ್ಪನ ಪಾಳ್ಯ ಹಾಗೂ ಫ್ರೇಜರ್ ಟೌನ್‌ನಲ್ಲಿ ದಾಳಿ‌ ಮಾಡಿ ಇಬ್ಬರನ್ನು ಬಂಧಿಸಿದೆ.

ಸದ್ಯ ರಾಷ್ಟ್ರೀಯ ತನಿಖಾ ದಳ ಬಂಧಿತರ ವಿಚಾರಣೆ ಮಾಡ್ತಾ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರರು ರಾಜಧಾನಿಯಲ್ಲಿ ಪತ್ತೆಯಾಗ್ತಾರೋ ಅನ್ನೋ ಆತಂಕ ಇದೀಗ ಶುರುವಾಗಿದೆ.

Published On - 7:32 am, Fri, 9 October 20

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್