AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಡ್ಯ ನನ್ನ ಕರ್ಮಭೂಮಿ; ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರ್ತಿರಲಿಲ್ಲವೇನೋ?!’

ಮಂಡ್ಯ: ನಾನು ಬರ್ತೀನಿ ಎಂದು ಮೃತ ರೈತನ ಮನೆಗೆ ಭೇಟಿ ಕೊಟ್ರಲ್ಲ. ಸಚಿವ ನಾರಾಯಣಗೌಡ ಭೇಟಿ ನೀಡಿದ್ದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರುತ್ತಿರಲಿಲ್ಲವೇನೋ ಎಂದು ಮೃತ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರವಾಗಿ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿಯಲ್ಲಿ ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಕರ್ಮ ಭೂಮಿ ಮಂಡ್ಯ. ನನ್ನ ಆಯ್ಕೆಯೂ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಯೂ ಮನೆಯಲ್ಲಿ ಕೂರಲ್ಲ ಎಂದು ನಿಖಿಲ್​ […]

‘ಮಂಡ್ಯ ನನ್ನ ಕರ್ಮಭೂಮಿ; ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರ್ತಿರಲಿಲ್ಲವೇನೋ?!’
KUSHAL V
|

Updated on: Nov 08, 2020 | 4:14 PM

Share

ಮಂಡ್ಯ: ನಾನು ಬರ್ತೀನಿ ಎಂದು ಮೃತ ರೈತನ ಮನೆಗೆ ಭೇಟಿ ಕೊಟ್ರಲ್ಲ. ಸಚಿವ ನಾರಾಯಣಗೌಡ ಭೇಟಿ ನೀಡಿದ್ದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರುತ್ತಿರಲಿಲ್ಲವೇನೋ ಎಂದು ಮೃತ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರವಾಗಿ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿಯಲ್ಲಿ ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಕರ್ಮ ಭೂಮಿ ಮಂಡ್ಯ. ನನ್ನ ಆಯ್ಕೆಯೂ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಯೂ ಮನೆಯಲ್ಲಿ ಕೂರಲ್ಲ ಎಂದು ನಿಖಿಲ್​ ಹೇಳಿದರು. ನನ್ನ ಮೊದಲ ಆಯ್ಕೆ ಪಕ್ಷ ನಂತರ ಸಿನಿಮಾ ಎಂದು ಸಹ ಹೇಳಿದರು.

ಸಾವಿನ ಮನೆಯಲ್ಲಿ ಸಾಂತ್ವನದ ರಾಜಕೀಯ? ಈ ನಡುವೆ, K.R.ಪೇಟೆ ಕ್ಷೇತ್ರದಲ್ಲಿ ಸಾವಿನ ಮನೆಯಲ್ಲಿ ಸಾಂತ್ವನದ ರಾಜಕೀಯ ನಡೆದಿದೆ ಎಂದು ಸ್ಥಳೀಯರು ಮಾತನಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಚೌಡೇನಹಳ್ಳಿಯ ರೈತ ನಂಜೇಗೌಡ(60) ಸಾಲಬಾಧೆ ಹಿನ್ನೆಲೆಯಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ. ಹಾಗಾಗಿ, ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲು ನಿರ್ಧರಿಸಿದ್ದರು. ನಿನ್ನೆಯೇ ನಿಗದಿಯಾಗಿದ್ದ ಕಾರ್ಯಕ್ರಮದಂತೆ ನಿಖಿಲ್ ಇಂದು ಭೇಟಿಗೆ ಮುಂದಾಗಿದ್ದರು.

ಆದರೆ, ನಿಖಿಲ್ ಭೇಟಿಗೂ ಮುನ್ನ ಮೃತ ರೈತನ ಮನೆಗೆ ಇಂದು ಸಚಿವ ಕೆ.ಸಿ.ನಾರಾಯಣಗೌಡ ಭೇಟಿ ನೀಡಿದರು. ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 25 ಸಾವಿರ ರೂಪಾಯಿ ವೈಯಕ್ತಿಕ ನೆರವು ಸಹ ನೀಡಿದರು. ಹೀಗಾಗಿ, ರೈತ ಸತ್ತಾಗ ಬಾರದ ರಾಜಕೀಯ ನಾಯಕರು ಸಾಂತ್ವನ ಹೇಳಲು ನಾ ಮುಂದು ತಾ ಮುಂದು ಎಂದು ಬಂದಿರುವುದು ನಿಜಕ್ಕೂ ವಿಪರ್ಯಾಸ ಎಂದು ಸ್ಥಳೀಯರು ಮಾತನಾಡಿಕೊಂಡಿದ್ದಾರೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!