AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಆಯೇಷಾ ಬಾನು
| Updated By: Digi Tech Desk|

Updated on:Feb 10, 2021 | 9:12 AM

Share

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ