Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತದ ವಿಚಾರದಲ್ಲಿ ಧರ್ಮಸಂಕಟದ ಸ್ಥಿತಿ: ನಿರ್ಮಲಾ ಸೀತಾರಾಮನ್

ಪೆಟ್ರೋಲ್ ಮತ್ತು ಡೀಸೆಲ್​ಗಳ ಮೇಲೆ ಕೇಂದ್ರ ಸರ್ಕಾರ ಮಾತ್ರ ತೆರಿಗೆ ವಿಧಿಸುತ್ತಿಲ್ಲ. ರಾಜ್ಯ ಸರ್ಕಾರಗಳೂ ತೆರಿಗೆ ಹಾಕುತ್ತಿವೆ. ಬೆಲೆ ತಗ್ಗಿಸಬೇಕು ಎಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಗೂಡಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತದ ವಿಚಾರದಲ್ಲಿ ಧರ್ಮಸಂಕಟದ ಸ್ಥಿತಿ: ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 05, 2021 | 10:31 PM

ದೆಹಲಿ: ಪೆಟ್ರೋಲ್​ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ​ ತೆರಿಗೆಗಳ ಕಡಿತದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇಂಧನಗಳ ಬೆಲೆಗಳು ಸತತವಾಗಿ ಏರುಗತಿಯಲ್ಲಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವರು, ಜನರ ಕಷ್ಟ ನಮಗೆ ಅರ್ಥವಾಗುತ್ತೆ. ಆದರೆ ನಾವು ಧರ್ಮಸಂಕಟದ ಪರಿಸ್ಥಿತಿ ಅನುಭವಿಸುತ್ತಿದ್ದೇವೆ’ ಎಂದರು.

ಇಂಧನ ಬೆಲೆ ಏರಿಕೆ ಸಮಸ್ಯೆಯ ರಾಜ್ಯ ಸರ್ಕಾರಗಳೊಂದಿಗೆ ಮುಕ್ತವಾಗಿ ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಇಂಧನ ದರ ಏರಿಕೆಯಿಂದ ಗ್ರಾಹಕರಿಗೆ ಹೊರೆ ಆಗುತ್ತಿರುವ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಆದರೆ ನಾವು ಧರ್ಮಸಂಕಟದ ಸ್ಥಿತಿಯಲ್ಲಿದ್ದೇವೆ. ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಆಶಯ ನಮಗೂ ಇದೆ ಎಂದು ಸಚಿವರು ನುಡಿದರು.

ಪೆಟ್ರೋಲ್ ಮತ್ತು ಡೀಸೆಲ್​ಗಳ ಮೇಲೆ ಕೇಂದ್ರ ಸರ್ಕಾರ ಮಾತ್ರ ತೆರಿಗೆ ವಿಧಿಸುತ್ತಿಲ್ಲ. ರಾಜ್ಯ ಸರ್ಕಾರಗಳೂ ತೆರಿಗೆ ಹಾಕುತ್ತಿವೆ. ಬೆಲೆ ತಗ್ಗಿಸಬೇಕು ಎಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಗೂಡಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಕೇಂದ್ರ ಸರ್ಕಾರವು ಸಂಗ್ರಹಿಸುವ ಒಟ್ಟು ತೆರಿಗೆಯಲ್ಲಿ ಶೇ 41ರಷ್ಟು ಮೊತ್ತ ರಾಜ್ಯಗಳಿಗೆ ಕೊಡಬೇಕಾಗುತ್ತದೆ. ಹೀಗಾಗಿ ತೆರಿಗೆ ಇಳಿಕೆ ಬಗ್ಗೆ ಕೇಂದ್ರ ಸರ್ಕಾರವೊಂದೇ ನಿರ್ಧರಿಸಿದರೆ ಪ್ರಯೋಜನವಾಗುವುದಿಲ್ಲ. ಕೇಂದ್ರ, ರಾಜ್ಯಗಳು ಒಗ್ಗೂಡಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪುನರುಚ್ಚರಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ಜಿಎಸ್​ಟಿ ವ್ಯಾಪ್ತಿಗೆ ತರಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಬಗ್ಗೆ ಜಿಎಸ್‌ಟಿ ಮಂಡಳಿ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ

ಇದನ್ನೂ ಓದಿ: Petrol Price: ಪೆಟ್ರೋಲ್ ದರ ಮತ್ತೂ ಹೆಚ್ಚಬಹುದು, ಇದು ನನ್ನನ್ನು ಧರ್ಮಸಂಕಟಕ್ಕೆ ನೂಕಿದೆ: ನಿರ್ಮಲಾ ಸೀತಾರಾಮನ್​

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು