AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ. ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ […]

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 29, 2020 | 7:58 AM

Share

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ.

ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ ಕರೆಮಾಡಿ ಮಾಹಿತಿ ನೀಡ್ತಾರೆ. ಕೊರೊನಾ ದೃಢವಾಗ್ತಿದ್ದಂತೆ ಸೋಂಕಿತರು ಆಸ್ಪತ್ರೆಗೆ ಅವರೇ ಹೋಗುತ್ತಿದ್ದಾರೆ. ಮನೆ ಬಳಿ ಆ್ಯಂಬುಲೆನ್ಸ್‌ ಬಂದ್ರೆ ಜನರು ಬೇರೆ ರೀತಿ ನೋಡ್ತಾರೆ.

ಅಲ್ಲದೆ ಮತ್ತೆ ಕೆಲವರು ನಾಲ್ಕೈದು ಗಂಟೆ ಕಾದರೂ ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಆತಂಕದಿಂದ ತಮ್ಮ ವಾಹನಗಳಲ್ಲಿಯೇ ಆಸ್ಪತ್ರೆಗೆ ತೆರಳ್ತಿದ್ದಾರೆ. ಸೋಂಕಿತರು ಹೀಗೆ ಆಸ್ಪತ್ರೆಗೆ ಹೋಗುತ್ತಿರುವುದರಿಂದ ಆತಂಕ ಶುರುವಾಗಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ ರಸ್ತೆಗಳಲ್ಲಿ ಸೋಂಕಿತರು ವಾಹನ ಓಡಿಸಿಕೊಂಡು ಬರ್ತಿದ್ದಾರೆ. ರಾಜಧಾನಿಯಲ್ಲೇ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ