AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌ 19 ಟೆಸ್ಟ್‌ನಲ್ಲಿ CCB ಪಾಸ್, ನಿಟ್ಟುಸಿರು ಬಿಟ್ಟ ಪೊಲೀಸ್‌ ಕುಟುಂಬಸ್ಥರು

ಬೆಂಗಳೂರು: ಬಂಧಿತ ಆರೋಪಿಯೊಬ್ಪ ಕೊರೊನಾ ಪೀಡಿತ ಅನ್ನೋದು ಗೊತ್ತಾಗ್ತಿದ್ದಂತೆ ಬೆಂಗಳೂರಿನ ಸಿಸಿಬಿ ಪೊಲೀಸರ ಜಂಘಾಬಲವೇ ಉಡುಗಿ ಹೋಗಿತ್ತು. ಓಲಾ ಕಂಪನಿಗೆ ವಂಚಿಸಿದ್ದ ಪ್ರಕರಣದಡಿ ಬಂಧಿಸಿದ್ದ ಕೋವಿಡ್‌ ಪೇಶೆಂಟ್‌ ಆರೋಪಿಯನ್ನ ಆಸ್ಪತ್ರೆಗೆ ಸಾಗಿಸಿದ ನಂತರ, ಇಡೀ ಸಿಸಿಬಿ ಕಚೇರಿಯನ್ನೇ ಲಾಕ್‌ಡೌನ್‌ ಮಾಡಿ ಸಾನಿಟೈಸ್‌ ಕೂಡಾ ಮಾಡಿದ್ರು. ಇಷ್ಟೇ ಅಲ್ಲ ಸಿಸಿಬಿಯಲ್ಲಿದ್ದ ಎಲ್ಲ ಸಿಬ್ಬಂದಿಗೆ ಮಲ್ಲೇಶ್ವರದಲ್ಲಿರೋ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಟೆಸ್ಟ್‌ ಕೂಡಾ ಮಾಡಿಸಿದ್ರು. ನಂತರ ಅವರನ್ನ ಕ್ವಾರಂಟೈನ್‌ ಕೂಡಾ ಮಾಡಿದರು. ಇತ್ತ ಸಿಸಿಬಿ ಪೊಲೀಸರು ಮತ್ತು ಅವರ […]

ಕೋವಿಡ್‌ 19 ಟೆಸ್ಟ್‌ನಲ್ಲಿ CCB ಪಾಸ್, ನಿಟ್ಟುಸಿರು ಬಿಟ್ಟ ಪೊಲೀಸ್‌ ಕುಟುಂಬಸ್ಥರು
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 15, 2020 | 11:07 AM

ಬೆಂಗಳೂರು: ಬಂಧಿತ ಆರೋಪಿಯೊಬ್ಪ ಕೊರೊನಾ ಪೀಡಿತ ಅನ್ನೋದು ಗೊತ್ತಾಗ್ತಿದ್ದಂತೆ ಬೆಂಗಳೂರಿನ ಸಿಸಿಬಿ ಪೊಲೀಸರ ಜಂಘಾಬಲವೇ ಉಡುಗಿ ಹೋಗಿತ್ತು. ಓಲಾ ಕಂಪನಿಗೆ ವಂಚಿಸಿದ್ದ ಪ್ರಕರಣದಡಿ ಬಂಧಿಸಿದ್ದ ಕೋವಿಡ್‌ ಪೇಶೆಂಟ್‌ ಆರೋಪಿಯನ್ನ ಆಸ್ಪತ್ರೆಗೆ ಸಾಗಿಸಿದ ನಂತರ, ಇಡೀ ಸಿಸಿಬಿ ಕಚೇರಿಯನ್ನೇ ಲಾಕ್‌ಡೌನ್‌ ಮಾಡಿ ಸಾನಿಟೈಸ್‌ ಕೂಡಾ ಮಾಡಿದ್ರು.

ಇಷ್ಟೇ ಅಲ್ಲ ಸಿಸಿಬಿಯಲ್ಲಿದ್ದ ಎಲ್ಲ ಸಿಬ್ಬಂದಿಗೆ ಮಲ್ಲೇಶ್ವರದಲ್ಲಿರೋ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಟೆಸ್ಟ್‌ ಕೂಡಾ ಮಾಡಿಸಿದ್ರು. ನಂತರ ಅವರನ್ನ ಕ್ವಾರಂಟೈನ್‌ ಕೂಡಾ ಮಾಡಿದರು. ಇತ್ತ ಸಿಸಿಬಿ ಪೊಲೀಸರು ಮತ್ತು ಅವರ ಕುಟುಂಬಗಳಲ್ಲಿ ಆತಂಕ ಮನೆ ಮಾಡಿತ್ತು.

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!

ಈಗ ಆ ಆತಂಕಕ್ಕೆ ತೆರೆ ಬಿದ್ದಿದೆ. ಸಿಸಿಬಿ ಮೂಲಗಳ ಪ್ರಕಾರ ಟೆಸ್ಟ್‌ ಮಾಡಿಸಿಕೊಂಡ ಯಾವುದೇ ಪೊಲೀಸ್‌ ಸಿಬ್ಬಂದಿಯ ಟೆಸ್ಟ್‌ ಪಾಸಿಟಿವ್‌ ಬಂದಿಲ್ಲವಂತೆ. ಹೀಗಾಗಿ ಬೆಂಗಳೂರು ಪೊಲೀಸ್‌ರಲ್ಲಿ ಈಗ ಮತ್ತೆ ಚೈತನ್ಯ ಬಂದಿದೆ. ಆದರೂ ಮುಂದಿನ ದಿನಗಳಲ್ಲಿ ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಅನ್ನೋ ಲೆಕ್ಕಾಚಾರದಲ್ಲಿ ಪೊಲೀಸ್‌ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಸಿಸಿಬಿ ಹೆಡ್‌ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ದೃಢ ಈ ಮಧ್ಯೆ, ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಟೆಸ್ಟ್‌ ಮಾಡಿಸಿಕೊಂಡ ಪೊಲೀಸರ ಅದೃಷ್ಟ ಇನ್ನೊಂದು ಪ್ರಕರಣದ ಪೊಲೀಸ್‌ಗೆ ಇಲ್ಲ ಅನಿಸುತ್ತೆ. ಯಾಕಂದ್ರೆ ಬೌರಿಂಗ್‌ ಆಸ್ಪತ್ರೆಯಲ್ಲಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡಿದ್ದ ಸಿಸಿಬಿಯ ಹೆಡ್‌ಕಾನ್‌ಸ್ಟೇಬಲ್‌ಗೆ ಪಾಸಿಟಿವ್‌ ಬಂದಿದೆ. ಹೀಗಾಗಿ ಸಿಸಿಬಿಯಲ್ಲಿ ಮಧ್ಯಾಹ್ನವಿದ್ದ ಖುಷಿ ಸಂಜೆಗಿಲ್ಲ ಎನ್ನುವಂತಾಗಿದೆ.

Published On - 5:53 pm, Sun, 14 June 20

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್