AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಇತ್ತ ಬೆಳೆಯೂ ಇಲ್ಲ.. ಭೂಮಿಯೂ ಇಲ್ಲ ಅನ್ನುವಂತಾಗಿದೆ.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!
ಆಯೇಷಾ ಬಾನು
| Edited By: |

Updated on:Nov 30, 2020 | 8:24 AM

Share

ಹಾಸನ: ರಾಜ್ಯದ 7 ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ರಾಜ್ಯದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣವಾಗಿ ಆಮೆಗತಿಯಲ್ಲಿ ಸಾಗ್ತಿದೆ. ಸೂಕ್ತ ಅನುದಾನದ ಕೊರತೆಯಿಂದ 5 ವರ್ಷದಿಂದ ನಡೆಯುತ್ತಿರೋ ಕಾಮಗಾರಿ ಇನ್ನೂ ಮುಗಿದಿಲ್ಲ. ಮತ್ತೊಂದೆಡೆ ಭೂಮಿ ಕೊಟ್ಟರೆ ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದ ಬೆಳೆಗಾರರೂ ಕಂಗಾಲಾಗಿದ್ದಾರೆ.

ಅನುದಾನದ ಕೊರತೆಯಿಂದ ಪೂರ್ಣಗೊಳ್ಳದ ಯೋಜನೆ: ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡ ಎತ್ತಿನಹೊಳೆ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ.

ಹಾಸನ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸಲು ಸಾವಿರಾರು ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಸಕಲೇಶಪುರ ತಾಲೂಕಿನ ಕೆಲವೆಡೆ ರೈತರಿಂದ ನೇರವಾಗಿ ಭೂಮಿ ಖರೀದಿಸಿ ಹೆಚ್ಚಿನ ಪರಿಹಾರ ನೀಡಲಾಗಿತ್ತು. ಆದ್ರೆ ಇದೇ ಆಸೆ ತೋರಿಸಿ ಸಾವಿರಾರು ರೈತರಿಂದ ಭೂಸ್ವಾದಿನ ಮಾಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಜಲನಿಗಮ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿದೆ. 5 ವರ್ಷದಿಂದ ಪರಿಹಾರವೂ ಇಲ್ಲ. ಬೆಳೆಯೂ ಇಲ್ಲ. ಇತ್ತ ಭೂಮಿಯೂ ಇಲ್ಲ ಅನ್ನೋ ಪರಿಸ್ಥಿತಿ ಎದುರಾಗಿದೆ.

ಸಕಲೇಶಪುರ, ಬೇಲೂರು, ಆಲೂರು ಹಾಗೂ ಅರಸೀಕೆರೆ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ಕಾಲುವೆಗಳು ಹಾದುಹೋಗಲಿದೆ. ಭಾರಿ ಆಳದ ಕಾಲುವೆ ನಿರ್ಮಾಣದಿಂದ ಅಂತರ್ಜಲ ಬತ್ತಿಹೋಗಿ ಸಮಸ್ಯೆ ಆಗಲಿದೆ ಅನ್ನೋ ಆತಂಕ ಒಂದೆಡೆಯಾದ್ರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ ಸರ್ಕಾರ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡುತ್ತೆ ಅನ್ನೋ ಭರವಸೆಯಲ್ಲಿದ್ರು. ಆದ್ರೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಇದುವರೆಗೂ ಪರಿಹಾರವೇ ಸಿಕ್ಕಿಲ್ಲ. ಆದ್ರೆ ಉಸ್ತುವಾರಿ ಸಚಿವರು ಮಾತ್ರ ಬಾಕಿ ಪರಿಹಾರ ಹಣ ಕೊಡಿಸೋದಾಗಿ ಹೇಳ್ತಿದ್ದಾರೆ.

ಒಟ್ನಲ್ಲಿ ಎತ್ತಿನ ಹೊಳೆ ಯೋಜನೆಯಿಂದ ನೀರು ಬರುತ್ತೆ ಅಂತ ಲಕ್ಷಾಂತರ ರೈತರು ಕಾದು ಕುಳಿತಿದ್ದಾರೆ. ಆದ್ರೆ, ಯೋಜನೆ ಮುಗಿಸೋಕೆ ಸರ್ಕಾರ ಮನಸ್ಸು ಮಾಡ್ತಿಲ್ಲ. ಮತ್ತೊಂದೆಡೆ ರೈತರು ಇವತ್ತು ಪರಿಹಾರ ಸಿಗುತ್ತೆ ನಾಳೆ ಸಿಗುತ್ತೆ ಅಂತ ಎದುರು ನೋಡ್ತಿದ್ದಾರೆ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡಿಸೋ ಕೆಲ್ಸ ಮಾಡ್ಬೇಕಿದೆ.

Published On - 7:39 am, Mon, 30 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್