AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಇತ್ತ ಬೆಳೆಯೂ ಇಲ್ಲ.. ಭೂಮಿಯೂ ಇಲ್ಲ ಅನ್ನುವಂತಾಗಿದೆ.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 30, 2020 | 8:24 AM

Share

ಹಾಸನ: ರಾಜ್ಯದ 7 ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ರಾಜ್ಯದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣವಾಗಿ ಆಮೆಗತಿಯಲ್ಲಿ ಸಾಗ್ತಿದೆ. ಸೂಕ್ತ ಅನುದಾನದ ಕೊರತೆಯಿಂದ 5 ವರ್ಷದಿಂದ ನಡೆಯುತ್ತಿರೋ ಕಾಮಗಾರಿ ಇನ್ನೂ ಮುಗಿದಿಲ್ಲ. ಮತ್ತೊಂದೆಡೆ ಭೂಮಿ ಕೊಟ್ಟರೆ ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದ ಬೆಳೆಗಾರರೂ ಕಂಗಾಲಾಗಿದ್ದಾರೆ.

ಅನುದಾನದ ಕೊರತೆಯಿಂದ ಪೂರ್ಣಗೊಳ್ಳದ ಯೋಜನೆ: ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡ ಎತ್ತಿನಹೊಳೆ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ.

ಹಾಸನ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸಲು ಸಾವಿರಾರು ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಸಕಲೇಶಪುರ ತಾಲೂಕಿನ ಕೆಲವೆಡೆ ರೈತರಿಂದ ನೇರವಾಗಿ ಭೂಮಿ ಖರೀದಿಸಿ ಹೆಚ್ಚಿನ ಪರಿಹಾರ ನೀಡಲಾಗಿತ್ತು. ಆದ್ರೆ ಇದೇ ಆಸೆ ತೋರಿಸಿ ಸಾವಿರಾರು ರೈತರಿಂದ ಭೂಸ್ವಾದಿನ ಮಾಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಜಲನಿಗಮ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿದೆ. 5 ವರ್ಷದಿಂದ ಪರಿಹಾರವೂ ಇಲ್ಲ. ಬೆಳೆಯೂ ಇಲ್ಲ. ಇತ್ತ ಭೂಮಿಯೂ ಇಲ್ಲ ಅನ್ನೋ ಪರಿಸ್ಥಿತಿ ಎದುರಾಗಿದೆ.

ಸಕಲೇಶಪುರ, ಬೇಲೂರು, ಆಲೂರು ಹಾಗೂ ಅರಸೀಕೆರೆ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ಕಾಲುವೆಗಳು ಹಾದುಹೋಗಲಿದೆ. ಭಾರಿ ಆಳದ ಕಾಲುವೆ ನಿರ್ಮಾಣದಿಂದ ಅಂತರ್ಜಲ ಬತ್ತಿಹೋಗಿ ಸಮಸ್ಯೆ ಆಗಲಿದೆ ಅನ್ನೋ ಆತಂಕ ಒಂದೆಡೆಯಾದ್ರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ ಸರ್ಕಾರ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡುತ್ತೆ ಅನ್ನೋ ಭರವಸೆಯಲ್ಲಿದ್ರು. ಆದ್ರೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಇದುವರೆಗೂ ಪರಿಹಾರವೇ ಸಿಕ್ಕಿಲ್ಲ. ಆದ್ರೆ ಉಸ್ತುವಾರಿ ಸಚಿವರು ಮಾತ್ರ ಬಾಕಿ ಪರಿಹಾರ ಹಣ ಕೊಡಿಸೋದಾಗಿ ಹೇಳ್ತಿದ್ದಾರೆ.

ಒಟ್ನಲ್ಲಿ ಎತ್ತಿನ ಹೊಳೆ ಯೋಜನೆಯಿಂದ ನೀರು ಬರುತ್ತೆ ಅಂತ ಲಕ್ಷಾಂತರ ರೈತರು ಕಾದು ಕುಳಿತಿದ್ದಾರೆ. ಆದ್ರೆ, ಯೋಜನೆ ಮುಗಿಸೋಕೆ ಸರ್ಕಾರ ಮನಸ್ಸು ಮಾಡ್ತಿಲ್ಲ. ಮತ್ತೊಂದೆಡೆ ರೈತರು ಇವತ್ತು ಪರಿಹಾರ ಸಿಗುತ್ತೆ ನಾಳೆ ಸಿಗುತ್ತೆ ಅಂತ ಎದುರು ನೋಡ್ತಿದ್ದಾರೆ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡಿಸೋ ಕೆಲ್ಸ ಮಾಡ್ಬೇಕಿದೆ.

Published On - 7:39 am, Mon, 30 November 20

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?