AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಇತ್ತ ಬೆಳೆಯೂ ಇಲ್ಲ.. ಭೂಮಿಯೂ ಇಲ್ಲ ಅನ್ನುವಂತಾಗಿದೆ.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!
ಆಯೇಷಾ ಬಾನು
| Edited By: |

Updated on:Nov 30, 2020 | 8:24 AM

Share

ಹಾಸನ: ರಾಜ್ಯದ 7 ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ರಾಜ್ಯದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣವಾಗಿ ಆಮೆಗತಿಯಲ್ಲಿ ಸಾಗ್ತಿದೆ. ಸೂಕ್ತ ಅನುದಾನದ ಕೊರತೆಯಿಂದ 5 ವರ್ಷದಿಂದ ನಡೆಯುತ್ತಿರೋ ಕಾಮಗಾರಿ ಇನ್ನೂ ಮುಗಿದಿಲ್ಲ. ಮತ್ತೊಂದೆಡೆ ಭೂಮಿ ಕೊಟ್ಟರೆ ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದ ಬೆಳೆಗಾರರೂ ಕಂಗಾಲಾಗಿದ್ದಾರೆ.

ಅನುದಾನದ ಕೊರತೆಯಿಂದ ಪೂರ್ಣಗೊಳ್ಳದ ಯೋಜನೆ: ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡ ಎತ್ತಿನಹೊಳೆ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ.

ಹಾಸನ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸಲು ಸಾವಿರಾರು ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಸಕಲೇಶಪುರ ತಾಲೂಕಿನ ಕೆಲವೆಡೆ ರೈತರಿಂದ ನೇರವಾಗಿ ಭೂಮಿ ಖರೀದಿಸಿ ಹೆಚ್ಚಿನ ಪರಿಹಾರ ನೀಡಲಾಗಿತ್ತು. ಆದ್ರೆ ಇದೇ ಆಸೆ ತೋರಿಸಿ ಸಾವಿರಾರು ರೈತರಿಂದ ಭೂಸ್ವಾದಿನ ಮಾಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಜಲನಿಗಮ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿದೆ. 5 ವರ್ಷದಿಂದ ಪರಿಹಾರವೂ ಇಲ್ಲ. ಬೆಳೆಯೂ ಇಲ್ಲ. ಇತ್ತ ಭೂಮಿಯೂ ಇಲ್ಲ ಅನ್ನೋ ಪರಿಸ್ಥಿತಿ ಎದುರಾಗಿದೆ.

ಸಕಲೇಶಪುರ, ಬೇಲೂರು, ಆಲೂರು ಹಾಗೂ ಅರಸೀಕೆರೆ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ಕಾಲುವೆಗಳು ಹಾದುಹೋಗಲಿದೆ. ಭಾರಿ ಆಳದ ಕಾಲುವೆ ನಿರ್ಮಾಣದಿಂದ ಅಂತರ್ಜಲ ಬತ್ತಿಹೋಗಿ ಸಮಸ್ಯೆ ಆಗಲಿದೆ ಅನ್ನೋ ಆತಂಕ ಒಂದೆಡೆಯಾದ್ರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ ಸರ್ಕಾರ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡುತ್ತೆ ಅನ್ನೋ ಭರವಸೆಯಲ್ಲಿದ್ರು. ಆದ್ರೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಇದುವರೆಗೂ ಪರಿಹಾರವೇ ಸಿಕ್ಕಿಲ್ಲ. ಆದ್ರೆ ಉಸ್ತುವಾರಿ ಸಚಿವರು ಮಾತ್ರ ಬಾಕಿ ಪರಿಹಾರ ಹಣ ಕೊಡಿಸೋದಾಗಿ ಹೇಳ್ತಿದ್ದಾರೆ.

ಒಟ್ನಲ್ಲಿ ಎತ್ತಿನ ಹೊಳೆ ಯೋಜನೆಯಿಂದ ನೀರು ಬರುತ್ತೆ ಅಂತ ಲಕ್ಷಾಂತರ ರೈತರು ಕಾದು ಕುಳಿತಿದ್ದಾರೆ. ಆದ್ರೆ, ಯೋಜನೆ ಮುಗಿಸೋಕೆ ಸರ್ಕಾರ ಮನಸ್ಸು ಮಾಡ್ತಿಲ್ಲ. ಮತ್ತೊಂದೆಡೆ ರೈತರು ಇವತ್ತು ಪರಿಹಾರ ಸಿಗುತ್ತೆ ನಾಳೆ ಸಿಗುತ್ತೆ ಅಂತ ಎದುರು ನೋಡ್ತಿದ್ದಾರೆ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡಿಸೋ ಕೆಲ್ಸ ಮಾಡ್ಬೇಕಿದೆ.

Published On - 7:39 am, Mon, 30 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ