AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಇತ್ತ ಬೆಳೆಯೂ ಇಲ್ಲ.. ಭೂಮಿಯೂ ಇಲ್ಲ ಅನ್ನುವಂತಾಗಿದೆ.

ಎತ್ತಿನಹೊಳೆಗೆ ಭೂಮಿ ಕೊಟ್ಟು ಪರಿಹಾರದ ಭರವಸೆಯಲ್ಲೇ ಕಂಗೆಟ್ಟ ಅನ್ನದಾತರು, ಇತ್ತ ಯೋಜನೆ ಇಲ್ಲ.. ಪರಿಹಾರನೂ ಇಲ್ಲ..!
ಆಯೇಷಾ ಬಾನು
| Edited By: |

Updated on:Nov 30, 2020 | 8:24 AM

Share

ಹಾಸನ: ರಾಜ್ಯದ 7 ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ರಾಜ್ಯದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣವಾಗಿ ಆಮೆಗತಿಯಲ್ಲಿ ಸಾಗ್ತಿದೆ. ಸೂಕ್ತ ಅನುದಾನದ ಕೊರತೆಯಿಂದ 5 ವರ್ಷದಿಂದ ನಡೆಯುತ್ತಿರೋ ಕಾಮಗಾರಿ ಇನ್ನೂ ಮುಗಿದಿಲ್ಲ. ಮತ್ತೊಂದೆಡೆ ಭೂಮಿ ಕೊಟ್ಟರೆ ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದ ಬೆಳೆಗಾರರೂ ಕಂಗಾಲಾಗಿದ್ದಾರೆ.

ಅನುದಾನದ ಕೊರತೆಯಿಂದ ಪೂರ್ಣಗೊಳ್ಳದ ಯೋಜನೆ: ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡ ಎತ್ತಿನಹೊಳೆ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸೋ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಯೋಜನೆಗೆ ಭೂಮಿಕೊಟ್ಟು ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ.

ಹಾಸನ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 7 ಜಿಲ್ಲೆಗಳಿಗೆ ಕುಡಿಯೋ ನೀರು ಒದಗಿಸಲು ಸಾವಿರಾರು ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಸಕಲೇಶಪುರ ತಾಲೂಕಿನ ಕೆಲವೆಡೆ ರೈತರಿಂದ ನೇರವಾಗಿ ಭೂಮಿ ಖರೀದಿಸಿ ಹೆಚ್ಚಿನ ಪರಿಹಾರ ನೀಡಲಾಗಿತ್ತು. ಆದ್ರೆ ಇದೇ ಆಸೆ ತೋರಿಸಿ ಸಾವಿರಾರು ರೈತರಿಂದ ಭೂಸ್ವಾದಿನ ಮಾಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಜಲನಿಗಮ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿದೆ. 5 ವರ್ಷದಿಂದ ಪರಿಹಾರವೂ ಇಲ್ಲ. ಬೆಳೆಯೂ ಇಲ್ಲ. ಇತ್ತ ಭೂಮಿಯೂ ಇಲ್ಲ ಅನ್ನೋ ಪರಿಸ್ಥಿತಿ ಎದುರಾಗಿದೆ.

ಸಕಲೇಶಪುರ, ಬೇಲೂರು, ಆಲೂರು ಹಾಗೂ ಅರಸೀಕೆರೆ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ಕಾಲುವೆಗಳು ಹಾದುಹೋಗಲಿದೆ. ಭಾರಿ ಆಳದ ಕಾಲುವೆ ನಿರ್ಮಾಣದಿಂದ ಅಂತರ್ಜಲ ಬತ್ತಿಹೋಗಿ ಸಮಸ್ಯೆ ಆಗಲಿದೆ ಅನ್ನೋ ಆತಂಕ ಒಂದೆಡೆಯಾದ್ರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ ಸರ್ಕಾರ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡುತ್ತೆ ಅನ್ನೋ ಭರವಸೆಯಲ್ಲಿದ್ರು. ಆದ್ರೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಇದುವರೆಗೂ ಪರಿಹಾರವೇ ಸಿಕ್ಕಿಲ್ಲ. ಆದ್ರೆ ಉಸ್ತುವಾರಿ ಸಚಿವರು ಮಾತ್ರ ಬಾಕಿ ಪರಿಹಾರ ಹಣ ಕೊಡಿಸೋದಾಗಿ ಹೇಳ್ತಿದ್ದಾರೆ.

ಒಟ್ನಲ್ಲಿ ಎತ್ತಿನ ಹೊಳೆ ಯೋಜನೆಯಿಂದ ನೀರು ಬರುತ್ತೆ ಅಂತ ಲಕ್ಷಾಂತರ ರೈತರು ಕಾದು ಕುಳಿತಿದ್ದಾರೆ. ಆದ್ರೆ, ಯೋಜನೆ ಮುಗಿಸೋಕೆ ಸರ್ಕಾರ ಮನಸ್ಸು ಮಾಡ್ತಿಲ್ಲ. ಮತ್ತೊಂದೆಡೆ ರೈತರು ಇವತ್ತು ಪರಿಹಾರ ಸಿಗುತ್ತೆ ನಾಳೆ ಸಿಗುತ್ತೆ ಅಂತ ಎದುರು ನೋಡ್ತಿದ್ದಾರೆ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡಿಸೋ ಕೆಲ್ಸ ಮಾಡ್ಬೇಕಿದೆ.

Published On - 7:39 am, Mon, 30 November 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್