ಕೊರೊನಾ ನಡುವೆಯೂ ಜನ ಜಾತ್ರೆಯಲ್ಲಿ ಭಾಗಿ, ಅಧಿಕಾರಿಗಳೋ.. ಗಪ್ ಚುಪ್!

ವಿಜಯಪುರ: ಕೊರೊನಾ ಉಪಟಳವಿದ್ದರೂ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ಜನ ಕಾನೂನು ಉಲ್ಲಂಘಿಸಿ ಯಾವುದೇ ಸುರಕ್ಷತಾ ಕ್ರಮವಿಲ್ಲದೆ ದುರ್ಗಾದೇವಿ ಹಾಗೂ ಸೇವಾಲಾಲ್ ಜಾತ್ರೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನೆಡೆದಿದೆ. ನಿನ್ನೆಯಷ್ಟೇ ಕೂಡಗಿ ಗ್ರಾಮದಲ್ಲಿ ಏಳು ದಿನಗಳವರೆಗೆ ಗ್ರಾಮದ ಹಿರಿಯರ ನಿರ್ಧಾರದಂತೆ ಲಾಕ್ ಡೌನ್ ಜಾರಿ ಮಾಡಿದ್ದರು. ಆದರೆ ಇಂದು ಅದೇ ಗ್ರಾಮದ ಮತ್ತೊಂದು ಗುಂಪಿನಿಂದ ಜಾತ್ರೆ ಆಯೋಜನೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು, ಪುರುಷರು ಎಂಬ ಬೇಧವಿಲ್ಲದೇ.. ಯಾವುದೇ ಸುರಕ್ಷತಾ ಕ್ರಮಗಳನ್ನ ತೆಗೆದುಕ್ಕೊಳ್ಳದೆ ಜಾತ್ರೆ ನೆಡೆಸಲಾಗಿದೆ. […]

ಕೊರೊನಾ ನಡುವೆಯೂ ಜನ ಜಾತ್ರೆಯಲ್ಲಿ ಭಾಗಿ, ಅಧಿಕಾರಿಗಳೋ.. ಗಪ್ ಚುಪ್!
ಸಾಧು ಶ್ರೀನಾಥ್​

Updated on: Jul 17, 2020 | 6:05 PM

ವಿಜಯಪುರ: ಕೊರೊನಾ ಉಪಟಳವಿದ್ದರೂ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ಜನ ಕಾನೂನು ಉಲ್ಲಂಘಿಸಿ ಯಾವುದೇ ಸುರಕ್ಷತಾ ಕ್ರಮವಿಲ್ಲದೆ ದುರ್ಗಾದೇವಿ ಹಾಗೂ ಸೇವಾಲಾಲ್ ಜಾತ್ರೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನೆಡೆದಿದೆ.

ನಿನ್ನೆಯಷ್ಟೇ ಕೂಡಗಿ ಗ್ರಾಮದಲ್ಲಿ ಏಳು ದಿನಗಳವರೆಗೆ ಗ್ರಾಮದ ಹಿರಿಯರ ನಿರ್ಧಾರದಂತೆ ಲಾಕ್ ಡೌನ್ ಜಾರಿ ಮಾಡಿದ್ದರು. ಆದರೆ ಇಂದು ಅದೇ ಗ್ರಾಮದ ಮತ್ತೊಂದು ಗುಂಪಿನಿಂದ ಜಾತ್ರೆ ಆಯೋಜನೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು, ಪುರುಷರು ಎಂಬ ಬೇಧವಿಲ್ಲದೇ.. ಯಾವುದೇ ಸುರಕ್ಷತಾ ಕ್ರಮಗಳನ್ನ ತೆಗೆದುಕ್ಕೊಳ್ಳದೆ ಜಾತ್ರೆ ನೆಡೆಸಲಾಗಿದೆ.

ಜಾತ್ರೆಗಾಗಿ ವಿಶೇಷ ಮಟನ್ ಊಟದ ವ್ಯವಸ್ಥೆಯೂ ಮಾಡಲಾಗಿದ್ದು ಗ್ರಾಮಸ್ಥರೆಲ್ಲ ಗುಂಪು ಗುಂಪಾಗಿ ಕುಳಿತು ಭೋಜನ ಮಾಡಿದ್ದಾರೆ. ಈ ಕಾನೂನುಬಾಹಿರ ಚಟುವಟಿಕೆಗಳೆಲ್ಲ ಸಂಬಂಧಿಸಿದ ಅಧಿಕಾರಿಗಳ ಕಣ್ಣಿಗೆ ಕಂಡರೂ ಸಹ ಕಂಡೂ‌‌‌ ಕಾಣದಂತಿದಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸುವಂತಿತ್ತು.

Published On - 5:54 pm, Fri, 17 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us