Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ. ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ […]

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ
Follow us
ಆಯೇಷಾ ಬಾನು
| Updated By:

Updated on:Jul 30, 2020 | 9:49 PM

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ.

ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ ವಿಗ್ರಹಗಳನ್ನ ತಯಾರಿಸಿದ್ದಾರೆ. ಆದ್ರೆ ಕೊರೊನಾ ಇರೋ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಕುಂಬಾರರು ಸಿಎಂ ಮೊರೆ ಹೋಗಿದ್ದಾರೆ. ನಮಗೂ ವ್ಯಾಪಾರ‌ ಮಾಡೋಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿ ಮನೆಯಲ್ಲೇ ಪ್ರತಿಷ್ಠಾಪಿಸಲು ಚಿಕ್ಕ‌ ಚಿಕ್ಕ ಮಣ್ಣಿನ ಗಣೇಶನನ್ನ ತಯಾರಿಸಿದ್ದೀವಿ. ಆದ್ರೆ ಇದುವರೆಗೂ ಯಾರೂ ಆರ್ಡರ್ ಮಾಡಿಲ್ಲ. ಇಷ್ಟೊತ್ತಿಗಾಗಲೇ ಸಿಕ್ಕಾಪಟ್ಟೆ ಆರ್ಡರ್ಸ್ ಬರ್ತಾ ಇತ್ತು. ಸರ್ಕಾರವೇ ನಮ್ಮ ‌ಸಮಸ್ಯೆಗೆ ಸ್ಪಂದಿಸಬೇಕು. ವ್ಯಾಪಾರ ಮಾಡೋಕೆ ಅನುಮತಿ ಕೊಡಬೇಕು. ಇಲ್ಲವಾದ್ರೆ ಪರಿಹಾರ ಘೋಷಣೆ ಮಾಡ್ಬೇಕು ಅಂತಾ ಕುಂಬಾರರು ಒತ್ತಾಯ ಮಾಡಿದ್ದಾರೆ.

Published On - 2:38 pm, Wed, 29 July 20

ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!