AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದ ಸಾರಿಗೆ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೂ ಇಲ್ಲ ಸಂಬಳ

ಮಹಾಮಾರಿ ಕೊರೊನಾ ಬರೋಕಿಂತ ಹಿಂದೆ 1ನೇ ತಾರೀಖಿಗೆ ಕಚೇರಿ ಸಿಬ್ಬಂದಿಗೆಲ್ಲರಿಗೂ ಸಂಬಳ ಆಗ್ತಿತ್ತಂತೆ. ಆದ್ರೆ ಈಗ ಜನವರಿ 13 ಆದ್ರೂ ಸಾರಿಗೆ ಇಲಾಖೆ ಸಿಬ್ಬಂದಿಗೆ ವೇತನ ನೀಡಿಲ್ಲ.

ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದ ಸಾರಿಗೆ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೂ ಇಲ್ಲ ಸಂಬಳ
ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆಗೆ ಒಪ್ಪಿಗೆ ನೀಡಿದ ರಾಜ್ಯ ಸರ್ಕಾರ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 13, 2021 | 7:53 AM

Share

ಬೆಂಗಳೂರು: ದೀಪಾವಳಿಯನ್ನ ಕತ್ತಲೆಯಲ್ಲಿಯೇ ಕಳೆದಿದ್ದಾಯ್ತು. ಇದೀಗ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಸರದಿ. ಆದ್ರೆ ಈ ಹಬ್ಬಕ್ಕೂ ಸಾರಿಗೆ ನೌಕರರಿಗೆ ಸಂಬಳದ ಭಾಗ್ಯ ಇಲ್ಲ. ಜನವರಿ 13 ಆದ್ರೂ ಸಾರಿಗೆ ಇಲಾಖೆ ಸಿಬ್ಬಂದಿಗೆ ವೇತನ ನೀಡಿಲ್ಲವಂತೆ.

ಮಹಾಮಾರಿ ಕೊರೊನಾ ಬರೋಕಿಂತ ಹಿಂದೆ 1ನೇ ತಾರೀಖಿಗೆ ಕಚೇರಿ ಸಿಬ್ಬಂದಿಗೆಲ್ಲರಿಗೂ ಸಂಬಳ ಆಗ್ತಿತ್ತಂತೆ. 4ನೇ ತಾರೀಖಿಗೆ ಡಿಪೋ ಮೆಕ್ಯಾನಿಕ್‌, ಸಿಬ್ಬಂದಿಗೆ ಹಾಗೂ 7ನೇ ತಾರೀಖಿಗೆ ಡ್ರೈವರ್, ಕಂಡಕ್ಟರ್ಸ್‌ಗೆ ವೇತನವಾಗ್ತಿತ್ತು. ಆದ್ರೆ ಕೊವಿಡ್ ಸೋಂಕು ಬಂದ ಬಳಿಕ ಈ ಶಿಸ್ತು ತಪ್ಪಿಹೋಗಿದೆ. ದೀಪಾವಳಿಯಲ್ಲೂ ವೇತನವಿಲ್ಲದೆ ಸಿಬ್ಬಂದಿ ಹಬ್ಬ ಆಚರಿಸಿದ್ದರು. ಈಗ ಸಂಕ್ರಾಂತಿ ಹಬ್ಬ ಬಂದರೂ ವೇತನವಾಗಿಲ್ಲ.

KSRTCಯಲ್ಲಿ 38 ಸಾವಿರ ನೌಕರರಿದ್ದಾರೆ. BMTCಯಲ್ಲಿ 36 ಸಾವಿರ ನೌಕರರು ಕಾರ್ಯ ನಿರ್ವಹಿಸ್ತಿದ್ದಾರೆ. ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ನೌಕರರು ಸೇರಿ ಒಟ್ಟು ಒಂದು ಲಕ್ಷದ ಮೂವತ್ತು ಸಾವಿರ ನೌಕರರಿದ್ದಾರೆ. ಇಷ್ಟೂ ಕುಟುಂಬಗಳು ಸಂಕ್ರಾಂತಿಗೆ ಸಂಬಳ ಇಲ್ಲದೇ ಹಬ್ಬ ಆಚರಣೆ ಮಾಡಲು ಕಷ್ಟ ಪಡುವಂತಾಗಿದೆ. ವೇತನ ನೀಡದ ಸಾರಿಗೆ ನಿಗಮಗಳ ಕ್ರಮಕ್ಕೆ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ -ಕೋಡಿಹಳ್ಳಿ ಚಂದ್ರಶೇಖರ್ ಘೋಷಣೆ, ಯಾವುದೇ ಕ್ಷಣ ಬಸ್​ ರೈಟ್.. ರೈಟ್​!

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ