AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸ್ತಬ್ಧ: ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯಲೇ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಕ್ಷಣ ಕ್ಷಣಕ್ಕೂ ಹೋರಾಟ ಕಾವೇರುತ್ತಿದೆ. ನಗರದ ವಿವಿಧೆಡೆ ರೈತಪರ ಹೋರಾಟಗಾರರು ಜಮಾಯಿಸುತ್ತಿದ್ದಾರೆ. ಮೈಸೂರು ಬ್ಯಾಂಕ್​ ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಸೇರುತ್ತಿದ್ದಾರೆ. ಅನ್ನದಾತರ ಕಿಚ್ಚಿಗೆ ರಾಜಧಾನಿ ಬೆಂಗಳೂರು ಸ್ತಬ್ಧವಾಗುತ್ತಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ. ಪ್ರಮುಖ ಜಂಕ್ಷನ್​ಗಳಲ್ಲಿ ರೈತರಿಂದ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್​ಗಳು ಓಡಾಡ್ತಿದ್ರೂ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಸಂಚಾರ ನಡೆಸುತ್ತಿವೆ. […]

ಬೆಂಗಳೂರು ಸ್ತಬ್ಧ: ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯಲೇ ಇಲ್ಲ
ಆಯೇಷಾ ಬಾನು
| Edited By: |

Updated on:Sep 28, 2020 | 9:33 AM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಕ್ಷಣ ಕ್ಷಣಕ್ಕೂ ಹೋರಾಟ ಕಾವೇರುತ್ತಿದೆ. ನಗರದ ವಿವಿಧೆಡೆ ರೈತಪರ ಹೋರಾಟಗಾರರು ಜಮಾಯಿಸುತ್ತಿದ್ದಾರೆ. ಮೈಸೂರು ಬ್ಯಾಂಕ್​ ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಸೇರುತ್ತಿದ್ದಾರೆ. ಅನ್ನದಾತರ ಕಿಚ್ಚಿಗೆ ರಾಜಧಾನಿ ಬೆಂಗಳೂರು ಸ್ತಬ್ಧವಾಗುತ್ತಿದೆ.

ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ. ಪ್ರಮುಖ ಜಂಕ್ಷನ್​ಗಳಲ್ಲಿ ರೈತರಿಂದ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್​ಗಳು ಓಡಾಡ್ತಿದ್ರೂ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಸಂಚಾರ ನಡೆಸುತ್ತಿವೆ. ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿಗಳಂತೋ ಬೀದಿಗೆ ಇಳಿಯಲೇ ಇಲ್ಲ. ಹೋಟೆಲ್​ಗಳು ಓಪನ್ ಇದ್ರೂ ಗ್ರಾಹಕರಿಲ್ಲದೆ ಬಿಕೋ ಅಂತಿವೆ.

Published On - 8:58 am, Mon, 28 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More