AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ಜನಗಳಿಂದ ತುಂಬಿ ತುಳುಕುತ್ತಿದ್ದ ಬೀಚ್ ಈಗ ಖಾಲಿ ಖಾಲಿ

ಉಡುಪಿ: ವೀಕೆಂಡ್ ಬಂದ್ರೆ ಸಾಕು ಈ ಬೀಚಲ್ಲಿ ಸಾವಿರಾರು ಪ್ರವಾಸಿಗರು ಸೇರುತ್ತಿದ್ದರು. ಬಂಡೆಕಲ್ಲಿನ ಮೇಲೆ ನಡೆದಾಡುತ್ತಾ ಮೋಜು-ಮಸ್ತಿ ಮಾಡುತ್ತಿದ್ದ ಬೀಚ್ ಈಗ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಉಡುಪಿ ದೇವಾಲಯಗಳ ನಾಡು ಇದು ಪರಶುರಾಮನ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿನ ಭೋರ್ಗರೆಯುವ ಕಡಲು, ಉಡುಪಿ ಜಿಲ್ಲೆಯ ಸುತ್ತಮುತ್ತಲಿನ ಪ್ರಕೃತಿಯ ಸೌಂದರ್ಯ, ಸುಂದರವಾದ ತಾಣ ನೋಡಲು ಮೂಲೆಮೂಲೆಗಳಿಂದ ಸಹಸ್ರಾರು ಪ್ರವಾಸಿಗರು ಆಗಮಿಸುತ್ತಾರೆ. ಶಾಲಾ ಮಕ್ಕಳಿಗೆ ರಜೆಯ ಸಮಯ ಮತ್ತು ವೀಕೆಂಡ್ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಉಡುಪಿ ಕಡೆ […]

ಸದಾ ಜನಗಳಿಂದ ತುಂಬಿ ತುಳುಕುತ್ತಿದ್ದ ಬೀಚ್ ಈಗ ಖಾಲಿ ಖಾಲಿ
ಕಾಪು ಲೈಟ್ ಹೌಸ್
ಆಯೇಷಾ ಬಾನು
|

Updated on:May 31, 2020 | 2:32 PM

Share

ಉಡುಪಿ: ವೀಕೆಂಡ್ ಬಂದ್ರೆ ಸಾಕು ಈ ಬೀಚಲ್ಲಿ ಸಾವಿರಾರು ಪ್ರವಾಸಿಗರು ಸೇರುತ್ತಿದ್ದರು. ಬಂಡೆಕಲ್ಲಿನ ಮೇಲೆ ನಡೆದಾಡುತ್ತಾ ಮೋಜು-ಮಸ್ತಿ ಮಾಡುತ್ತಿದ್ದ ಬೀಚ್ ಈಗ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಉಡುಪಿ ದೇವಾಲಯಗಳ ನಾಡು ಇದು ಪರಶುರಾಮನ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿನ ಭೋರ್ಗರೆಯುವ ಕಡಲು, ಉಡುಪಿ ಜಿಲ್ಲೆಯ ಸುತ್ತಮುತ್ತಲಿನ ಪ್ರಕೃತಿಯ ಸೌಂದರ್ಯ, ಸುಂದರವಾದ ತಾಣ ನೋಡಲು ಮೂಲೆಮೂಲೆಗಳಿಂದ ಸಹಸ್ರಾರು ಪ್ರವಾಸಿಗರು ಆಗಮಿಸುತ್ತಾರೆ.

ಶಾಲಾ ಮಕ್ಕಳಿಗೆ ರಜೆಯ ಸಮಯ ಮತ್ತು ವೀಕೆಂಡ್ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಉಡುಪಿ ಕಡೆ ಆಗಮಿಸುತ್ತಾರೆ. ಮಣಿಪಾಲ ವಿದ್ಯಾಭ್ಯಾಸಕ್ಕಾಗಿ ಆಗಮಿಸಿದ ಹೊರರಾಜ್ಯದ ವಿದ್ಯಾರ್ಥಿಗಳು ಉಡುಪಿ ಸುತ್ತಮುತ್ತಲಿನ ಬೀಚ್ ಗಳಲ್ಲಿ ಎಂಜಾಯ್ ಮಾಡುತ್ತಾರೆ.

ಲೈಟ್ ಹೌಸ್ ನೋಡೋದೆ ಸುಂದರ: ಉಡುಪಿ ಜಿಲ್ಲೆಯ ಪ್ರಸಿದ್ಧ ಬೀಚ್​ಗಳಲ್ಲಿ ಒಂದಾದ ಕಾಪು ಲೈಟ್ ಹೌಸ್ ವೀಕೆಂಡ್ ಬಂದ್ರೆ ಸಾಕು ಸಾವಿರಾರು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಈ ಬೀಚ್ ಎಲ್ಲಾ ಬೀಚ್ ಗಳಿಗಿಂತ ವಿಶೇಷವಾಗಿದೆ ಸುಮಾರು 27,12 ಮೀಟರ್ ಎತ್ತರದ ಬಂಡೆಯ ಮೇಲೆ ಅದ್ಭುತ ಕಲ್ಪನೆಯೊಂದಿಗೆ ಬ್ರಿಟಿಷರ ಕಾಲದಲ್ಲಿ ಅಂದ್ರೆ 1901 ರಲ್ಲಿ ನಿರ್ಮಾಣಗೊಂಡಿರುವ ದಾರಿ ಸೂಚಕ ಸಮುದ್ರದಲ್ಲಿ ಸಂಚರಿಸುವ ವಾಣಿಜ್ಯ ಸರಕು, ನಾವೆಗಳಿಗೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಲಕ್ಷಾಂತರ ಮೀನುಗಾರರಿಗೆ ದಡ ತೋರುವಲ್ಲಿ ನೆರವಾಗುತ್ತೆ. ಈ ಲೈಟ್ ಹೌಸ್ ನೋಡಲು ಪ್ರವಾಸಿಗರು ಆಗಮಿಸುತ್ತಾರೆ.

ಹೆಬ್ಬಂಡೆಗಳಿಗೆ ಅಪ್ಪಳಿಸುವ ಕಡಲ ಅಲೆಗಳು, ಸೂರ್ಯಸ್ತದ ಮೋಹಕ ದೃಶ್ಯ, ಜನರಿಗೆ ಓಡಾಡಲು ವಿಶಾಲವಾದ ಸ್ಥಳವಕಾಶ ಇರುವುದರಿಂದ ಈ ಬೀಚ್ ವಿಭಿನ್ನವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಲಾಕ್​ಡೌನ್​ನಿಂದಾಗಿ ಪ್ರವಾಸಿಗರು ಇತ್ತ ಮುಖ ಮಾಡುತ್ತಿಲ್ಲ. ಬೀಚ್ ಪರಿಸರದಲ್ಲಿರುವ ಅಂಗಡಿಗಳು ಮುಚ್ಚಿ ಸುಮಾರು ತಿಂಗಳುಗಳು ಕಳೆದಿವೆ. ಪ್ರವಾಸಿಗರನ್ನು ತಿರುಗಾಡಿಸಲು ಉಪಯೋಗಿಸುತ್ತಿದ್ದ ಬೋಟ್​ಗಳು ದಡ ಸೇರಿವೆ.

ಇನ್ನು ಮಳೆಗಾಲ ಆರಂಭವಾಗಿರುವುದರಿಂದ ಬೀಚ್​ಗೆ ಬರುವ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೀಚ್​ಗಳ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಿ, ಹೆಚ್ಚು ಹೆಚ್ಚು ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸಲು ಮುಂದಾಗಬೇಕು. ಏನೇ ಆಗಲಿ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರೇಕ್ಷಣೀಯ ಸ್ಥಳ ಮತ್ತು ಬೀಚ್​ಗಳ ಅಭಿವೃದ್ಧಿ ಆಗಲಿ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುವಂತೆ ಆಗಲಿ ಎಂಬುದೇ ನಮ್ಮ ಆಶಯ.

Published On - 2:10 pm, Sun, 31 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು