AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE Nifty Glitches: ತಾಂತ್ರಿಕ ಸಮಸ್ಯೆಯಿಂದ ನಿಫ್ಟಿ ವಹಿವಾಟು ಸ್ಥಗಿತ

ತಾಂತ್ರಿಕ ಸಮಸ್ಯೆಯಿಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕ ಎನ್ ಎಸ್ ಇ ನಿಫ್ಟಿ ಫೆಬ್ರವರಿ 24ರ ಬುಧವಾರ ಬೆಳಗ್ಗೆ 10 ಗಂಟೆಯಿಂದಲೇ ಎಲ್ಲ ಸೆಗ್ಮೆಂಟ್ ನಲ್ಲೂ ವಹಿವಾಟು ನಿಲ್ಲಿಸಿದೆ. 

NSE Nifty Glitches: ತಾಂತ್ರಿಕ ಸಮಸ್ಯೆಯಿಂದ ನಿಫ್ಟಿ ವಹಿವಾಟು ಸ್ಥಗಿತ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 24, 2021 | 2:01 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವಾದ ಎನ್​ಎಸ್​ಇ (National Stock Exchange – NSE) ಫೆಬ್ರವರಿ 24ರ ಬೆಳಗ್ಗೆ 10.08ರ ಸುಮಾರಿಗೆ ಅಡ್​ಡೇಟ್ ಆಗುವುದು ನಿಂತಿತ್ತು. ಈ ಬಗ್ಗೆ ಸಿಎನ್​ಬಿಸಿ ಟಿವಿ18 ವರದಿ ಮಾಡಿತು. ಆ ನಂತರ 11.40ರಲ್ಲಿ ಫ್ಯೂಚರ್ ಅಂಡ್ ಆಪ್ಷನ್ಸ್ ಹಾಗೂ 11.43ರಲ್ಲಿ ಕ್ಯಾಶ್ ಮಾರುಕಟ್ಟೆಯನ್ನು ಸ್ಥಗಿತಗೊಳಿಸಲಾಯಿತು. ಶೀಘ್ರದಲ್ಲೇ ಸಮಸ್ಯೆ ನಿವಾರಣೆ ಮಾಡುವುದಾಗಿ ಎನ್​ಎಸ್​ಇ ಟ್ವೀಟ್ ಮಾಡಿತು. ಎನ್ಎಸ್​ಇ ಎರಡು ಟೆಲಿಕಾಂ ಸೇವೆಯನ್ನು ಪಡೆಯುತ್ತದೆ. ಎರಡರಲ್ಲೂ ಸಮಸ್ಯೆ ಎದುರಾಗಿದ್ದರಿಂದ ಇಂತಹ ಸ್ಥಿತಿ ಏರ್ಪಟ್ಟಿತು ಎಂದು ತಿಳಿಸಿರುವುದಾಗಿ ಎನ್​ಎಸ್​ಇ ಮತ್ತೊಂದು ಟ್ವೀಟ್ ಮಾಡಿದೆ.

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಗದು, ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಸೇರಿ ಎಲ್ಲ ಸೆಗ್ಮೆಂಟ್​ಗಳ ವಹಿವಾಟನ್ನು ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಬುಧವಾರ ಸ್ಥಗಿತಗೊಳಿಸಿದರೆ, ಬಿಎಸ್​ಇ ಸೆನ್ಸೆಕ್ಸ್ ವ್ಯವಹಾರ ಮುಂದುವರಿಸಿದೆ.

‘ಎನ್​ಎಸ್​ಇ ನಿಫ್ಟಿ, ಬ್ಯಾಂಕ್ ನಿಫ್ಟಿ, ನಗದು ದರಗಳು ಬೆಳಗ್ಗೆಯಿಂದಲೇ ಅಪ್​ಡೇಟ್ ಆಗುತ್ತಿಲ್ಲ. ಇದು ಈ ಎಕ್ಸ್​ಚೇಂಜ್​ನ ಸಮಸ್ಯೆ ಮತ್ತು ನಮಗೆ ಪರ್ಯಾಯಗಳು ಇಲ್ಲ’ ಎಂದು ಷೇರು ದಲ್ಲಾಳಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

ಫ್ಯೂಚರ್ಸ್ ಮಾರ್ಕೆಟ್ ದರಕ್ಕೆ ನಗದು ಮಾರುಕಟ್ಟೆಯ ದರವು ರೆಫರೆನ್ಸ್ ಇದ್ದಂತೆ. ಎನ್​ಎಸ್​ಇಯಲ್ಲಿ ಈ ರೀತಿಯ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷವೂ ಇಂಥ ಸಮಸ್ಯೆ ಹಲವು ಬಾರಿ ಆಗಿದೆ. ಈ ಸಮಸ್ಯೆಗೆ ಎಕ್ಸ್ ಚೇಂಜ್​ಗೆ ಸೆಬಿ ದಂಡ ವಿಧಿಸಿತ್ತು. ತಾಂತ್ರಿಕ ಸಮಸ್ಯೆಯಿಂದ ಉಂಟಾಗುವ ಸಮಸ್ಯೆಗೆ ಪರಿಹಾರ ನೀಡುವ ನೀತಿಯೊಂದನ್ನು ರೂಪಿಸುವುದಕ್ಕೆ ಸೆಬಿ ಯೋಚನೆ ಮಾಡುತ್ತಿದೆ.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

ಇದನ್ನೂ ಓದಿ: Market Bloodbath: ಷೇರುಪೇಟೆ ಕುಸಿತ; ಕರಗಿತು ಹೂಡಿಕೆದಾರರ 3.7 ಲಕ್ಷ ಕೋಟಿ ಸಂಪತ್ತು

Published On - 1:53 pm, Wed, 24 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ