AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE Nifty Glitches: ತಾಂತ್ರಿಕ ಸಮಸ್ಯೆಯಿಂದ ನಿಫ್ಟಿ ವಹಿವಾಟು ಸ್ಥಗಿತ

ತಾಂತ್ರಿಕ ಸಮಸ್ಯೆಯಿಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕ ಎನ್ ಎಸ್ ಇ ನಿಫ್ಟಿ ಫೆಬ್ರವರಿ 24ರ ಬುಧವಾರ ಬೆಳಗ್ಗೆ 10 ಗಂಟೆಯಿಂದಲೇ ಎಲ್ಲ ಸೆಗ್ಮೆಂಟ್ ನಲ್ಲೂ ವಹಿವಾಟು ನಿಲ್ಲಿಸಿದೆ. 

NSE Nifty Glitches: ತಾಂತ್ರಿಕ ಸಮಸ್ಯೆಯಿಂದ ನಿಫ್ಟಿ ವಹಿವಾಟು ಸ್ಥಗಿತ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 24, 2021 | 2:01 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವಾದ ಎನ್​ಎಸ್​ಇ (National Stock Exchange – NSE) ಫೆಬ್ರವರಿ 24ರ ಬೆಳಗ್ಗೆ 10.08ರ ಸುಮಾರಿಗೆ ಅಡ್​ಡೇಟ್ ಆಗುವುದು ನಿಂತಿತ್ತು. ಈ ಬಗ್ಗೆ ಸಿಎನ್​ಬಿಸಿ ಟಿವಿ18 ವರದಿ ಮಾಡಿತು. ಆ ನಂತರ 11.40ರಲ್ಲಿ ಫ್ಯೂಚರ್ ಅಂಡ್ ಆಪ್ಷನ್ಸ್ ಹಾಗೂ 11.43ರಲ್ಲಿ ಕ್ಯಾಶ್ ಮಾರುಕಟ್ಟೆಯನ್ನು ಸ್ಥಗಿತಗೊಳಿಸಲಾಯಿತು. ಶೀಘ್ರದಲ್ಲೇ ಸಮಸ್ಯೆ ನಿವಾರಣೆ ಮಾಡುವುದಾಗಿ ಎನ್​ಎಸ್​ಇ ಟ್ವೀಟ್ ಮಾಡಿತು. ಎನ್ಎಸ್​ಇ ಎರಡು ಟೆಲಿಕಾಂ ಸೇವೆಯನ್ನು ಪಡೆಯುತ್ತದೆ. ಎರಡರಲ್ಲೂ ಸಮಸ್ಯೆ ಎದುರಾಗಿದ್ದರಿಂದ ಇಂತಹ ಸ್ಥಿತಿ ಏರ್ಪಟ್ಟಿತು ಎಂದು ತಿಳಿಸಿರುವುದಾಗಿ ಎನ್​ಎಸ್​ಇ ಮತ್ತೊಂದು ಟ್ವೀಟ್ ಮಾಡಿದೆ.

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಗದು, ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಸೇರಿ ಎಲ್ಲ ಸೆಗ್ಮೆಂಟ್​ಗಳ ವಹಿವಾಟನ್ನು ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಬುಧವಾರ ಸ್ಥಗಿತಗೊಳಿಸಿದರೆ, ಬಿಎಸ್​ಇ ಸೆನ್ಸೆಕ್ಸ್ ವ್ಯವಹಾರ ಮುಂದುವರಿಸಿದೆ.

‘ಎನ್​ಎಸ್​ಇ ನಿಫ್ಟಿ, ಬ್ಯಾಂಕ್ ನಿಫ್ಟಿ, ನಗದು ದರಗಳು ಬೆಳಗ್ಗೆಯಿಂದಲೇ ಅಪ್​ಡೇಟ್ ಆಗುತ್ತಿಲ್ಲ. ಇದು ಈ ಎಕ್ಸ್​ಚೇಂಜ್​ನ ಸಮಸ್ಯೆ ಮತ್ತು ನಮಗೆ ಪರ್ಯಾಯಗಳು ಇಲ್ಲ’ ಎಂದು ಷೇರು ದಲ್ಲಾಳಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

ಫ್ಯೂಚರ್ಸ್ ಮಾರ್ಕೆಟ್ ದರಕ್ಕೆ ನಗದು ಮಾರುಕಟ್ಟೆಯ ದರವು ರೆಫರೆನ್ಸ್ ಇದ್ದಂತೆ. ಎನ್​ಎಸ್​ಇಯಲ್ಲಿ ಈ ರೀತಿಯ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷವೂ ಇಂಥ ಸಮಸ್ಯೆ ಹಲವು ಬಾರಿ ಆಗಿದೆ. ಈ ಸಮಸ್ಯೆಗೆ ಎಕ್ಸ್ ಚೇಂಜ್​ಗೆ ಸೆಬಿ ದಂಡ ವಿಧಿಸಿತ್ತು. ತಾಂತ್ರಿಕ ಸಮಸ್ಯೆಯಿಂದ ಉಂಟಾಗುವ ಸಮಸ್ಯೆಗೆ ಪರಿಹಾರ ನೀಡುವ ನೀತಿಯೊಂದನ್ನು ರೂಪಿಸುವುದಕ್ಕೆ ಸೆಬಿ ಯೋಚನೆ ಮಾಡುತ್ತಿದೆ.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

ಇದನ್ನೂ ಓದಿ: Market Bloodbath: ಷೇರುಪೇಟೆ ಕುಸಿತ; ಕರಗಿತು ಹೂಡಿಕೆದಾರರ 3.7 ಲಕ್ಷ ಕೋಟಿ ಸಂಪತ್ತು

Published On - 1:53 pm, Wed, 24 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!