AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಢೀಕರಣ ಪತ್ರವಿಲ್ಲದೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಕ್ಕೆ

ಧಾರವಾಡ: ಹೊರ ಜಿಲ್ಲೆಯಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಘಟನೆ ಧಾರವಾಡದ ಬಾಸೆಲ್ ಮಿಷನ್ ಕೇಂದ್ರದಲ್ಲಿ ನಡೆದಿದೆ. ಹೊರ ಜಿಲ್ಲೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಅವರು ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರದ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೊರಕ್ಕೆ ಹಾಕಲಾಗಿತ್ತು. ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿಯಿಲ್ಲ ಎಂದು ಹೇಳಲಾಗಿತ್ತು. […]

ದೃಢೀಕರಣ ಪತ್ರವಿಲ್ಲದೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಕ್ಕೆ
ಆಯೇಷಾ ಬಾನು
|

Updated on:Jun 25, 2020 | 11:04 AM

Share

ಧಾರವಾಡ: ಹೊರ ಜಿಲ್ಲೆಯಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಘಟನೆ ಧಾರವಾಡದ ಬಾಸೆಲ್ ಮಿಷನ್ ಕೇಂದ್ರದಲ್ಲಿ ನಡೆದಿದೆ.

ಹೊರ ಜಿಲ್ಲೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಅವರು ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರದ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೊರಕ್ಕೆ ಹಾಕಲಾಗಿತ್ತು.

ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿಯಿಲ್ಲ ಎಂದು ಹೇಳಲಾಗಿತ್ತು. ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರುವಂತೆ ಕೇಂದ್ರದ ಸಿಬ್ಬಂದಿ ಸೂಚಿಸಿದ್ದರು. ಆದರೆ ಕೊನೆಗೆ ಅಧಿಕಾರಿಗಳು ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇಂದಿನ ಪರೀಕ್ಷೆಗೆ ಮಾತ್ರ ಈ ಅವಕಾಶ ನೀಡಲಾಗಿದ್ದು, ಮುಂದಿನ ಪರೀಕ್ಷೆಗೆ ದೃಢೀಕರಣ ಪತ್ರ ಅವಶ್ಯಕವಾಗಿ ತರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Published On - 11:01 am, Thu, 25 June 20