AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ-ಖಾತೆಯ ನೆಪದಲ್ಲಿ ಅಧಿಕಾರಿಗಳಿಂದ ಕೋಟ್ಯಾಂತರ ರೂಪಾಯಿ ಅಕ್ರಮ.. ದೂರು ನೀಡಿದ್ರೂ ದಾಖಲಾಗಿಲ್ಲ ಎಫ್​ಐಆರ್

ಆ ನಗರಸಭೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್. ನಗರಸಭೆ ಕಣ್ಣಿಗೆ ಮಣ್ಣೆರಚಿ ಈ-ಖಾತೆಯ ನೆಪದಲ್ಲಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಅಕ್ರಮ ನಡೆಸಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಎಫ್​ಐಆರ್ ದಾಖಲಿಸಿಲ್ವಂತೆ.

ಈ-ಖಾತೆಯ ನೆಪದಲ್ಲಿ ಅಧಿಕಾರಿಗಳಿಂದ ಕೋಟ್ಯಾಂತರ ರೂಪಾಯಿ ಅಕ್ರಮ.. ದೂರು ನೀಡಿದ್ರೂ ದಾಖಲಾಗಿಲ್ಲ ಎಫ್​ಐಆರ್
ರಾಯಚೂರು ನಗರಸಭೆ
Follow us
ಆಯೇಷಾ ಬಾನು
|

Updated on: Mar 23, 2021 | 8:12 AM

ರಾಯಚೂರು ನಗರಸಭೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟ ಎಂಬಂತಾಗಿದೆ. ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ರಾಯಚೂರು ನಗರಸಭೆಗೆ ಬರೋಬ್ಬರಿ 30 ಕೋಟಿಗೂ ಹೆಚ್ಚು ಹಣ ಮೋಸವಾಗಿದೆ ಎಂಬ ಆರೋಪ ಕೇಳಿಬಂದಿದೆ. ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ ಈ ಖಾತೆ ಮಾಡಿಕೊಡುವ ನೆಪದಲ್ಲಿ ನಗರದ ವಿವಿಧೆಡೆ ಸರ್ಕಾರಿ ಭೂಮಿಯಲ್ಲಿ ಗುಡಿಸಲು, ಶೆಡ್ ಹಾಕೊಂಡಿದ್ದವರಿಗೂ ಈ ಖಾತೆ ಕೊಟ್ಟು ಅಕ್ರಮ ಎಸಗಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಇನ್ನು ರಾಯಚೂರು ಜಿಲ್ಲಾ ನಗರಾಭಿವೃದ್ಧಿ ಕೋಶ ನಡೆಸಿರುವ ತನಿಖೆಯಲ್ಲಿ ಅಕ್ರಮ ಬಯಲಾಗಿತ್ತು. ಹೀಗಾಗಿ ಅಕ್ರಮದಲ್ಲಿ ಶಾಮೀಲಾದ ಹಿಂದಿನ ಪೌರಾಯುಕ್ತ ಮತ್ತು ನಗರಸಭೆ ಸಿಬ್ಬಂದಿ ವಿರುದ್ಧ ಜಿಲ್ಲಾ ನಗರಾಭಿವೃದ್ಧಿ ಕೋಶಾಧಿಕಾರಿಗಳು ರಾಯಚೂರಿನ ಸದರಬಜಾರ್ ಠಾಣೆಗೆ ದೂರನ್ನು ಕೂಡ ಸಲ್ಲಿಸಿದ್ದರು. ಆದ್ರೆ ದೂರು ಸಲ್ಲಿಸಿ ತಿಂಗಳಾದ್ರೂ ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಈ ಬಗ್ಗೆ ರಾಯಚೂರು ಎಸ್​ಪಿರನ್ನ ಕೇಳಿದ್ರೆ, ಈ ದೂರಿಗೆ ಸಂಬಂಧಪಟ್ಟಂತೆ ದಾಖಲೆಗಳು, ಅಡಿಟ್ ವರದಿ ನೀಡಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತೆ ಅಂತಿದ್ದಾರೆ. ಒಟ್ನಲ್ಲಿ ಕೋಟಿ ಕೋಟಿ ಅಕ್ರಮದ ಆರೋಪ ಕೇಳಿ ಬಂದಿರೋ ಹಿನ್ನೆಲೆಯಲ್ಲಿ ಈಗಲಾದ್ರೂ ಸಂಬಂಧಪಟ್ಟವ್ರು ಅಲರ್ಟ್ ಆಗಬೇಕಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

ಇದನ್ನೂ ಓದಿ: ರಾಯಚೂರು ನಗರಸಭೆ ಚುನಾವಣೆಯಲ್ಲಿ ಕುರುಡು ಕಾಂಚಾಣ, ವಿನಯ್‌ ಕುಮಾರ್ ವಿರುದ್ಧ ಆರೋಪ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ